Advertisement

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

02:51 PM May 08, 2024 | Team Udayavani |

ರಾಮನಗರ: ಡಿಕೆ ಬ್ರದರ್ಸ್ ದೇವೇಗೌಡರು ಹಾಗೂ ಹೆಚ್ ಡಿಕೆ ತೇಜೋವಧೆಗೆ ಮುಂದಾಗಿದ್ದಾರೆ. ರಾಷ್ಟ್ರೀಯ ಪಕ್ಷದಿಂದ ಪ್ರಾದೇಶಿಕ ಪಕ್ಷವನ್ನು ಬೇರ್ಪಡಿಸಲು ಹುನ್ನಾರ ಮಾಡುತ್ತಿದ್ದಾರೆ. ಇಡೀ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ.

Advertisement

ನಗರದಲ್ಲಿದಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ವಿಚಾರವನ್ನು ನಾವೂ ಖಂಡಿಸುತ್ತೇವೆ. ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ಆದರೆ ಸಂತ್ರಸ್ತೆಯರ ವಿಡಿಯೋಗಳನ್ನು ಹಂಚಿಕೆ ಮಾಡಿರುವುದು ಎಷ್ಟು ಸರಿ. ದೇವೇಗೌಡರನ್ನು ರಾಜಕೀಯವಾಗಿ ಮುಗಿಸಲು ಈ ಕೃತ್ಯ ಮಾಡಿದ್ದಾರೆ. ಅವರು ಬಾಲ್ಯದಲ್ಲಿ ಮಾಡುತ್ತಿದ್ದ ಕೆಲಸವನ್ನ ಮುಂದುವರೆಸಿದ್ದಾರೆ. ಹಿಂದೆ ಟೆಂಟ್ ನಲ್ಲಿ ಸಿನಿಮಾ ತೋರಿಸುತ್ತಿದ್ದ ಪ್ರವೃತ್ತಿ ಮುಂದುವರೆಸಿದ್ದಾರೆ ಎಂದು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದರು.

ಹೆಣ್ಣುಮಕ್ಕಳ ಗೌರವವನ್ನು ಹಾಳು ಮಾಡಿದ್ದಾರೆ. ಡಿಸಿಎಂ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಡಿಕೆಶಿಗಿಲ್ಲ. ಕೂಡಲೇ ಡಿಕೆಶಿ ರಾಜಿನಾಮೆ ಕೊಟ್ಟು ಹೊರಬರಬೇಕು. ಇಡೀ ಪ್ರಕರಣವನ್ನು ಸಿಬಿಐ ಅಥವಾ ನ್ಯಾಯಾಂಗ ತನಿಖೆಗೆ ನೀಡಬೇಕು ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next