Advertisement

ಪರಿಷತ್ ಚುನಾವಣೆಯಲ್ಲಿ ಹಣ-ಬಲದೊಂದಿಗೆ ಎಲ್ಲವೂ ವರ್ಕ್ ಆಗುತ್ತದೆ: ಹೆಚ್ ಸಿ ಮಹದೇವಪ್ಪ

06:06 PM Nov 23, 2021 | Team Udayavani |

ಮೈಸೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಹಣ ಸೇರಿದಂತೆ ಎಲ್ಲಾ ಬಲಗಳು ವರ್ಕ್ ಆಗುತ್ತವೆ. ಪ್ರಜಾಪ್ರಭುತ್ವದಲ್ಲಿ ಇದು ನಮಗೆ ಇಷ್ಟವಿಲ್ಲದಿದ್ದರೂ ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಹೇಳಿದರು.

Advertisement

ನಗರದಲ್ಲಿ ಮಾತಾನಾಡಿದ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಮೈಸೂರು-ಚಾಮರಾಜನಗರ ಜಿಲ್ಲೆಯಲ್ಲಿ ಮೂರುವರೆ ಸಾವಿರಕ್ಕೂ ಅಧಿಕವಾಗಿ ನಮ್ಮ ಸದಸ್ಯರಿದ್ದಾರೆ. ನಾವು ಮೊದಲ ಪ್ರಾಶಸ್ತ್ಯದಲ್ಲೇ ಗೆಲ್ಲುತ್ತೇವೆ. ಎರಡನೇ ಸ್ಥಾನಕ್ಕೆ ಯಾರು ಯಾರು ಯಾವ ಬಲಗಳನ್ನು ಪ್ರಯೋಗಿಸುತ್ತಾರೋ ಗೊತ್ತಿಲ್ಲ. ಅದರ ಮೇಲೆ ಎರಡನೇ ಸ್ಥಾನದ ಫಲಿತಾಂಶ ನಿಂತಿದೆ ಎಂದರು.

ಇದನ್ನೂ ಓದಿ:ಸಂದೇಶ್ ನಾಗರಾಜ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರಿಂದ ಹೀಗೆ ಆಗಿದೆ: ಸಾ.ರಾ. ಮಹೇಶ್  

ಹಾಲಿ ಪರಿಷತ್ ಸದಸ್ಯರಿಗೆ ಟಿಕೆಟ್ ನೀಡದಿರುವುದಕ್ಕೆ ದೊಡ್ಡ ಕಾರಣಗಳೇನು ಇಲ್ಲ. ಕಾರ್ಯಕರ್ತರು ಬದಲಾವಣೆ ಬಯಸಿದ್ದರು. ಹಾಗಾಗಿ ಬೇರೆ ಅಭ್ಯರ್ಥಿಗೆ ಟಿಕೆಟ್ ಕೊಟ್ಟಿದ್ದೇವೆ ಎಂದರು.

ನಾನು ಟಿಕೆಟ್ ಆಕಾಂಕ್ಷಿಯಲ್ಲ:

Advertisement

ನಾನು ಎಂದಿಗೂ ಕನಸು ಮನಸಿನಲ್ಲೂ ಪರಿಷತ್ ಚುನಾವಣೆ ಬಗ್ಗೆ ಯೋಚನೆಯೇ ಮಾಡಿಲ್ಲ. ಆ ಸುದ್ದಿಯನ್ನು ಯಾರು ಸೃಷ್ಟಿಸಿದರೋ ನನಗೆ ಗೊತ್ತಿಲ್ಲ. ನಾನಂತೂ ಎಂದಿಗೂ ಪರಿಷತ್ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿರಲಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಈಶ್ವರಪ್ಪನವರೇ ನಮ್ಮಲ್ಲಿ ಜನ ಇಲ್ಲ,ಎಲ್ಲ ಕಡೆ ಶಂಖ ಊದಲಿಕ್ಕೆ ನಾನೇ ಹೋಗಬೇಕು: ಎಚ್ .ಡಿ.ಕೆ

ರಾಜ್ಯದ ನೆರೆ ಪರಿಸ್ಥಿತಿಯನ್ನು ಸರ್ಕಾರ ಸಂಪೂರ್ಣ ನಿರ್ಲಕ್ಷ್ಯಸಿದೆ. ಕೇವಲ ಪರ್ಸೆಂಟೇಜ್‌ಗಾಗಿ ಸಚಿವರು ಕೆಲಸ ಮಾಡುತ್ತಿದ್ದಾರೆ. ಖುದ್ದು ಪ್ರಧಾನಿಗೆ ಈ ವಿಚಾರದಲ್ಲಿ ಪತ್ರ ಹೋಗಿದೆ. ಕೆಲಸ ಮಾಡಲು ಸಚಿವರುಗಳಿಗೆ ಬದ್ಧತೆಯೂ ಇಲ್ಲ, ಆಸಕ್ತಿಯೂ ಇಲ್ಲ. ಸರ್ಕಾರ ಇರುವುದರ ಬಗ್ಗೆ ನನಗೆ ಅನುಮಾನ ಇದೆ‌. ಬೆಂಗಳೂರಿನಲ್ಲಿ ಕೆರೆ ಮತ್ತು ರಾಜಕಾಲುವೆ ಒತ್ತವರಿ ತೆರವು ಆಗಬೇಕು. ಇಲ್ಲದಿದ್ದರೆ ಬೆಂಗಳೂರು ಮತ್ತೊಂದು ಚೆನ್ನೈ ಆಗಲಿದೆ. ಸರ್ಕಾರ ಈ ನಿಟ್ಟಿನಲ್ಲಿ ಗಮನ ಹರಿಸಬೇಕಿದೆ ಎಂದು ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದರು.

Advertisement

Udayavani is now on Telegram. Click here to join our channel and stay updated with the latest news.

Next