Advertisement

Kimmane Rathnakar: ವಕೀಲ ವೃತ್ತಿಗೆ ಮರಳಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್

09:32 AM Jan 12, 2024 | Team Udayavani |

ಶಿವಮೊಗ್ಗ: ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಕೀಲ ವೃತ್ತಿಗೆ ಮರಳಿದ್ದಾರೆ. ಬೆಂಗಳೂರಿನ ವಕೀಲ ಸಂಘದಲ್ಲಿ ವಕೀಲ ವೃತ್ತಿ ಮುಂದುವರೆಸುವ ಕುರಿತು ಪ್ರಮಾಣ ಪತ್ರ ಸಲ್ಲಿಸಿದ್ದು ರಾಜಕೀಯ ವಲಯದಲ್ಲಿ ಚರ್ಚೆ ಶುರುವಾಗಿದೆ.

Advertisement

ಸತತ ಎರಡು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಅವರಿಗೆ ಆರ್ಥಿಕ ಸಂಕಷ್ಟ ತಲೆದೋರಿತ್ತು. ಇದರಿಂದ ಹೊರಬರಲು ಹಳೆಯ ವೃತ್ತಿಗೆ ಮರಳಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಇದೆ ನನ್ನ ಕೊನೆ ಚುನಾವಣೆ ಎಂದಿದ್ದ ಅವರಿಗೆ ಮತದಾರ ಕೈಹಿಡಿಯಲಿಲ್ಲ. ಲೋಕಸಭಾ ಚುನಾವಣೆಗೆ ಆಕಾಂಕ್ಷಿ ಎಂದು ಹೇಳಿಕೊಳ್ಳದಿದ್ದರು ಅವರ ಹೆಸರು ಅಲ್ಲಲ್ಲಿ ಕೇಳಿಬರುತಿತ್ತು. ಶುಕ್ರವಾರ ಸಿಎಂ ಹಾದಿಯಾಗಿ ಸಚಿವ ಸಂಪುಟವೇ ಶಿವಮೊಗ್ಗದಲ್ಲಿ ಇರಲಿದ್ದು ಕಿಮ್ಮನೆ ಅವರ ಜತೆ ಮಾತುಕತೆ ನಡೆಸಲಿದ್ದಾರೆಯೇ ಕಾದು ನೋಡಬೇಕಿದೆ.

ಇದನ್ನೂ ಓದಿ: US, UK Launch Strikes: ಯೆಮೆನ್‌ನಲ್ಲಿ ಹೌತಿ ನೆಲೆಗಳ ಮೇಲೆ ಬ್ರಿಟನ್, ಅಮೇರಿಕ ದಾಳಿ

Advertisement

Udayavani is now on Telegram. Click here to join our channel and stay updated with the latest news.

Next