Advertisement

ಸೋಂಕು ಬರುವುದು ಕಾಂಗ್ರೆಸ್ ನವರಿಗೆ ಮಾತ್ರವೇ? ಬಿಜೆಪಿಯವರಿಗೆ ಬರುವುದಿಲ್ಲವೇ?: ಕಿಮ್ಮನೆ

04:08 PM Jul 09, 2020 | keerthan |

ಶಿವಮೊಗ್ಗ: ಸಹಕಾರ ಸಂಘಗಳಲ್ಲಿ ಇರುವುದು ರೈತರ ಶೇರು ಹಣ. ಸರ್ಕಾರ ರೈತರ ಹಣಕ್ಕೆ ಕೈಹಾಕಿರುವುದು ಸರಿಯಲ್ಲ. ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೇ ಹಣ ನೀಡಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.

Advertisement

ಜಿಲ್ಲೆಯಲ್ಲಿ ಮಾತನಾಡಿದ ಅವರು ಸಹಕಾರಿ ಸಂಘದಿಂದ ಆಶಾ ಕಾರ್ಯಕರ್ತೆಯರಿಗೆ ಹಣ ದಾನವಾಗಿ ನೀಡಬೇಕು ಎಂದು ಸರ್ಕಾರ ಆದೇಶಿಸಿದೆ ಎಂದು ವಿಚಾರದ ಬಗ್ಗೆ ಮಾತನಾಡಿದರು. ರೈತರ ಹಣ ಕಿತ್ತುಕೊಂಡು ಆಶಾ ಕಾರ್ಯಕರ್ತೆಯರಿಗೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರದ ಈ ನಡೆಯ ವಿರುದ್ಧ ರಾಜ್ಯಾದ್ಯಂತ ಹೋರಾಟ‌ ರೂಪಿಸುತ್ತೇವೆ ಎಂದು ಎಚ್ಚರಿಸಿದರು.

ರಾಜ್ಯದಲ್ಲಿ ಸರ್ಕಾರ ಇದೆ ಎಂದು ಅನಿಸುವುದೇ ಇಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಒಬ್ಬರು ಕೆಲಸ ಮಾಡುತ್ತಿದ್ದಾರೆ. ಸಚಿವ ಸಂಪುಟದ ಇನ್ಯಾರೂ ಕೆಲಸ ಮಾಡುತ್ತಿಲ್ಲ. ಇಂಥ ಸರ್ಕಾರ‌ ನಡೆಸುವುದರ ಬದಲು ರಾಜೀನಾಮೆ ನೀಡಿ ಮನೆಗೆ ಹೋಗುವುದು ಉತ್ತಮ ಎಂದು ಟೀಕಿಸಿದ ಅವರು, ಇಂಥ ಆಡಳಿತ ನಡೆಸಲು ಬಿಜೆಪಿ 1700 ಕೋಟಿ ರೂಪಾಯಿ ನೀಡಿ ಶಾಸಕರನ್ನು ಖರೀದಿಸಿ ಸರ್ಕಾರ ರಚಿಸಬೇಕಿತ್ತೇ ಎಂದು ವ್ಯಂಗ್ಯವಾಡಿದರು.

ಭಾನುವಾರ ಲಾಕ್ ಡೌನ್ ಮಾಡಲಾಗಿತ್ತು.‌ ಅಂದು ಬಿಜೆಪಿ ಸಚಿವರು ಹಾಗೂ ಶಾಸಕರು ಶಂಕುಸ್ಥಾಪನೆ ಕಾರ್ಯಕ್ರಮ ನಡೆಸಿದ್ದಾರೆ. ಲಾಕ್ ಡೌನ್ ಅವಧಿಯಲ್ಲಿ ಜನರನ್ನು ಸೇರಿಸಿಕೊಂಡು ಶಂಕುಸ್ಥಾಪನೆ ಕಾರ್ಯಕ್ರಮ‌ ನಡೆಸುವುದು ಎಷ್ಟರ ಮಟ್ಟಿಗೆ‌ ಸರಿ. ಕೇವಲ ಕಾಂಗ್ರೆಸ್ ನವರಿಗೆ ಮಾತ್ರ ಸೋಂಕು ಬರುತ್ತದೆಯೇ? ಬಿಜೆಪಿಯವರಿಗೆ ಬರುವುದಿಲ್ಲವೇ? ಹೀಗಾದರೆ‌ ಲಾಕ್ ಡೌನ್ ಮಾಡಿದ್ದು ಯಾರಿಗೆ ಎಂದು ಕಿಮ್ಮನೆ ರತ್ನಾಕರ ಪ್ರಶ್ನಿಸಿದರು

Advertisement

Udayavani is now on Telegram. Click here to join our channel and stay updated with the latest news.

Next