Advertisement

ಜನತಾ ಪರಿವಾರದ ಹಿರಿಯ ನಾಯಕ, ಮಾಜಿ ಸಚಿವ ಎಂ.ರಘುಪತಿ ನಿಧನ

08:14 AM Jun 18, 2022 | Team Udayavani |

ಬೆಂಗಳೂರು: ಮಾಜಿ ಸಚಿವ ಎಂ.ರಘುಪತಿ ಅವರು ಶನಿವಾರ ಮುಂಜಾನೆ ತಮ್ಮ ಮಲ್ಲೇಶ್ವರಂ ನಿವಾಸದಲ್ಲಿ ನಿಧನ ಹೊಂದಿದರು.

Advertisement

ಜನತಾ ಪರಿವಾರದ ಹಿರಿಯ ನಾಯಕರಾಗಿದ್ದ ಎಂ.ರಘುಪತಿ ಅವರು ಮಲ್ಲೇಶ್ವರಂ ಮತ್ತು ಶಿವಾಜಿ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಗೆದ್ದು ಶಾಸಕರಾಗಿದ್ದರು. ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಅವರ ಸಂಪುಟದಲ್ಲಿ ಎಂ.ರಘುಪತಿ ಅವರು ಶಿಕ್ಷಣ ಸಚಿವರಾಗಿದ್ದರು.

ಜನತಾ ಪರಿವಾರದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದ ರಘುಪತಿ ಅವರು ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿದ್ದ ಎನ್ ಟಿ ರಾಮ ರಾವ್ ಗೆ ಆತ್ಮೀಯರಾಗಿದ್ದರು. ಇತ್ತೀಚಿನ ದಿನಗಳಲ್ಲಿ ಸಕ್ರಿಯ ರಾಜಕಾರಣದಿಂದ ದೂರವಾಗಿದ್ದರು.

ಇದನ್ನೂ ಓದಿ:ಮಂಗಳೂರು: ರಥಬೀದಿ ಶ್ರೀ ವೀರವೆಂಕಟೇಶ ದೇವರಿಗೆ ಅಮಿತಾಭ್‌ ನಮನ

ಇಂದು ಮುಂಜಾನೆ ಅಗಲಿದ ಎಂ.ರಘುಪತಿ ಅವರ ಪಾರ್ಥೀವ ಶರೀರವನ್ನು ಅವರ ಮಲ್ಲೇಶ್ವರಂ ನಿವಾಸದಲ್ಲಿ ಇರಿಸಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನಾಳೆ (ಜೂ.19) ಬೆಳಗ್ಗೆ ಅಂತಿಮ ವಿಧಿವಿಧಾನ ನಡೆಯಲಿದೆ ಎಂದು ಮೂಲಗಳು ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next