Advertisement

ವಿಜಯಪುರ ಜಿಲ್ಲೆಯಲ್ಲಿ 15 ದಿನ ಲಾಕ್‍ಡೌನ್ ಗೆ ಮಾಜಿ ಸಚಿವ ಎಂ.ಬಿ.ಪಾಟೀಲ ಆಗ್ರಹ

04:18 PM Jul 12, 2020 | keerthan |

ವಿಜಯಪುರ: ಕೋವಿಡ್-19 ಮಾರಣಾಂತಿಕ ಕಾಯಿಲೆ ತೀವ್ರವಾಗಿ ಉಲ್ಬಣವಾಗುತ್ತಿದ್ದು, ವಿಜಯಪುರ ಜಿಲ್ಲೆಯಲ್ಲಿ 15 ದಿನ ಲಾಕ್‍ಡೌನ್ ಮಾಡವಂತೆ ಮಾಜಿ ಸಚಿವ, ಬಬಲೆಶ್ವರ ಶಾಸಕ ಎಂ.ಬಿ.ಪಾಟೀಲ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Advertisement

ಈ ಕುರಿತು ಹೇಳಿಕೆ ನೀಡಿರುವ ಅವರು ವಿಜಯಪುರ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನಿಂದ ಸೋಂಕಿತರಾಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆಸ್ಪತ್ರೆಗಳಲ್ಲೂ ರೋಗಿಗಳಿಗೆ ಬೆಡ್ ಸಿಗದ ಪರಿಸ್ಥಿತಿ ಉಂಟಾಗಿದೆ. ಇದರಿಂದ‌ ಆರೋಗ್ಯ ವ್ಯವಸ್ಥೆ ಮೇಲೆಯೇ ಅತ್ಯಂತ ಗಂಭೀರ ಪರಿಣಾಮ ಉಂಟಾಗಿದೆ. ಆಸ್ಪತ್ರೆ ವೈದ್ಯರು, ಶೂಶ್ರಷಕ ಸಿಬ್ಬಂದಿ ಸೇರಿದಂತೆ ಇಡೀ ವ್ಯವಸ್ಥೆ ಸದ್ಯ ಸೋಂಕಿತರನ್ನು ಆರೈಕೆ ಮಾಡುವ ಸ್ಥಿತಿಯಲ್ಲಿ ಇಲ್ಲ ಸಂಕಷ್ಟ ಎದುರಾಗಿದೆ. ಕಾರಣ ಕೋವಿಡ್ ರೋಗ ನಿಗ್ರಹಕ್ಕಾಗಿ ವಿಜಯಪುರ ಜಿಲ್ಲೆಯಲ್ಲಿ 15 ದಿನ ಕಟ್ಟುನಿಟ್ಟಿನ ಲಾಕ್‍ಡೌನ್ ಜಾರಿಗೆ ತರುವದು ಅತೀ ಅಗತ್ಯವಿದೆ ಎಂದಿದ್ದಾರೆ.

ಈ ಕುರಿತು ಭಾನುವಾರ ಬೆಳಿಗ್ಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರೊಂದಿಗೆ ಚರ್ಚಿಸಲಾಗಿದೆ. ಹೆಚ್ಚಿನ ಹಾನಿ ಸಂಭವಿಸುವ ಮೊದಲು ಮುನ್ನೆಚ್ಚರಿಕೆ ಕ್ರಮವಾಗಿ ಸರಗಕಾರ ಲಾಕ್‍ಡೌನ್ ಘೋಷಿಸಬೇಕು ಎಂದು ಆಗ್ರಹಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next