Advertisement

ಎಸ್.ಎಂ.ಕೃಷ್ಣ ಸಂಪುಟದಲ್ಲಿ ಸಚಿವರಾಗಿದ್ದ ಟಿ.ಜಾನ್ ನಿಧನ

11:01 AM Feb 10, 2023 | Team Udayavani |

ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ಸಚಿವ ಟಿ. ಜಾನ್ (92) ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಂದು ಮುಂಜಾನೆ ನಿಧನ ಹೊಂದಿದ್ದಾರೆ.

Advertisement

ಅಬಕಾರಿ ಉದ್ಯಮದ ಮೂಲಕ ಹೆಸರು ಮಾಡಿದ್ದ ಅವರು. ಎಸ್‌ ಎಂ ಕೃಷ್ಣ ಮೂಲಸೌಕರ್ಯ ಮತ್ತು ಮೊಟ್ಟಮೊದಲ ಬಾರಿಗೆ ಸೃಷ್ಟಿಸಿದ್ದ ವಿಮಾನಯಾನ ಖಾತೆ ಸಚಿವರಾಗಿದ್ದರು.

ಮೂಲತಃ ಕೇರಳದವರಾದ ಟಿ.ಜಾನ್, ಕೊಡಗಿಗೆ ಬಂದು ಉದ್ಯಮದಲ್ಲಿ ತೊಡಗಿಕೊಂಡಿದ್ದರು. ಶಿಕ್ಷಣ ಸಂಸ್ಥೆಗಳು, ರೆಸಾರ್ಟ್ ಗಳನ್ನೂ ಕೂಡ ಜಾನ್ ಆರಂಭಿಸಿ ಯಶಸ್ಸು ಗಳಿಸಿದ್ದರು.

ನಾಳೆ ಶನಿವಾರ  ಬೆಂಗಳೂರಿನಲ್ಲಿ ಟಿ.ಜಾನ್ ಅವರ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next