Advertisement

ವಿದ್ಯಾರ್ಥಿಗಳ ಸಾಧನೆಗೆ ಮಾಜಿ ಸಚಿವೆ ಉಮಾಶ್ರೀ ಮೆಚ್ಚುಗೆ

11:31 AM May 07, 2019 | Suhan S |

ಬನಹಟ್ಟಿ: ಇಂದಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳು ಕಂಡುಬರುತ್ತಿವೆ. ಕೆಳ ಮಧ್ಯಮ ವರ್ಗದ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ನೀಡುತ್ತಿದ್ದಾರೆ. ಓದುವಂತಹ ಯಾವುದೆ ವಾತಾವರಣ ಇಲ್ಲದಿದ್ದರೂ ಈ ವಿದ್ಯಾರ್ಥಿಗಳು ಮಾಡುತ್ತಿರುವ ಸಾಧನೆ ಶ್ರೇಷ್ಠವಾದುದು ಎಂದು ಮಾಜಿ ಸಚಿವೆ ಉಮಾಶ್ರೀ ಹೇಳಿದರು.

Advertisement

ಸೋಮವಾರ ಸ್ಥಳೀಯ ಎಸ್‌ಆರ್‌ಎ ಪ್ರೌಢಶಾಲಾ ವಿದ್ಯಾರ್ಥಿ ರವಿಕುಮಾರ ಕರಲಟ್ಟಿ ಎಸ್‌ಎಸ್‌ಎಲ್ಸಿಯಲ್ಲಿ ರಾಜ್ಯಕ್ಕೆ ಆರನೇ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಸನ್ಮಾನಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳು ಕೂಡಾ ಉತ್ತಮವಾದ ಅಂಕ ಪಡೆದುಕೊಳ್ಳುತ್ತಿದ್ದಾರೆ. ಸರ್ಕಾರಿ ಶಾಲೆಗಳಿಗೆ ಇನ್ನಷ್ಟು ಮೂಲ ಸೌಕರ್ಯ ನೀಡಿದರೆ ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಫಲಿತಾಂಶ ಬರುತ್ತದೆ. ಮಕ್ಕಳ ಸಾಧನೆಯ ಹಿಂದೆ ಪಾಲಕರ ಮತ್ತು ಶಿಕ್ಷಕರ ತ್ಯಾಗ ಮಹತ್ವದ್ದಾಗಿದೆ. ವಿದ್ಯಾರ್ಥಿಗಳ ಸಾಧನೆಯ ಹಿಂದಿರುವ ಶಿಕ್ಷಕರನ್ನು ಸನ್ಮಾನಿಸುವ ಮತ್ತು ಗೌರವಿಸುವ ಕರ್ತವ್ಯ ನಮ್ಮದಾಗಿದೆ ಎಂದರು. ವಿದ್ಯಾರ್ಥಿಯ ತಂದೆ ಬಸವರಾಜ ಮತ್ತು ತಾಯಿ ಗೀತಾ ಅವರನ್ನು ಕೂಡಾ ಸನ್ಮಾನಿಸಲಾಯಿತು. ಲಕ್ಷ್ಮಣ ದೇಸಾರಟ್ಟಿ, ರಾಜು ಭದ್ರನವರ, ಸತ್ಯಪ್ಪ ಮಗದುಮ್ಮ, ಚಿದಾನಂದ ಗಾಳಿ, ಬಸವರಾಜ ಬೀಳಗಿ, ದಾನಪ್ಪ ಹುಲಜತ್ತಿ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next