Advertisement

Missing Case; ಕೋಟ್ ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

05:45 PM Sep 04, 2024 | Team Udayavani |

ಚನ್ನಮ್ಮನ ಕಿತ್ತೂರು: ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಿಂದ ಅಪಹರಣಕ್ಕೆ ಒಳಗಾದ ಬಿಜೆಪಿ ಸದಸ್ಯ ನಾಗರಾಜ ಅಸುಂಡಿ ಅವರು ಕೊನೆಗೂ ಪತ್ತೆಯಾಗಿದ್ದಾರೆ.

Advertisement

ನಾಗರಾಜ ಅಸುಂಡಿ ಅವರನ್ನು ಬೈಲಹೊಂಗಲ ಕೋರ್ಟ್ ಗೆ ಹಾಜರುಪಡಿಸಲು ಪೊಲೀಸರು ಕರೆತಂದಿದ್ದಾರೆ.

ಸೆಪ್ಟೆಂಬರ್ 3 ರಂದು ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಿಗದಿಯಾಗಿತ್ತು. ಸಂಖ್ಯಾಬಲ ಹೆಚ್ಚಿಸಿಕೊಂಡು ಅಧಿಕಾರ ಹಿಡಿಯಬೇಕು ಎಂದು ಕಾಂಗ್ರೆಸ್ ಮುಖಂಡರು ಅಪಹರಿಸಿದ್ದಾರೆ ಎಂದು ಚನ್ನಮ್ಮನ ಕಿತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನಾಗರಾಜ ಅಸುಂಡಿ ಅವರನ್ನು ಅಪಹರಣ ಮಾಡಿದ್ದ ವಾಹನ ಬೆಂಗಳೂರು ರೆಸಾರ್ಟ್ ಬಳಿ ಪತ್ತೆಯಾಗಿತ್ತು.

ಬಿಜೆಪಿ ತಮ್ಮ ಪಕ್ಷದ ಸದಸ್ಯನನ್ನು ಅಪಹರಿಸಿದ ಬಗ್ಗೆ ತೀವ್ರ ಪ್ರತಿಭಟನೆ ನಡೆಸಿತ್ತು. ನಾಗರಾಜ ಅಸುಂಡಿ ಅವರ ತಾಯಿ ಸಹ ಮಗನ ಅಪಹರಣದಿಂದ ಬೇಸರಗೊಂಡು ಧಾರವಾಡ ಆಸ್ಪತ್ರೆಗೆ ದಾಖಲಾಗಿದ್ದರು. ಕೊನೆಗೂ ನಾಗರಾಜ ಅಸುಂಡಿ ಪತ್ತೆಯಾಗಿದ್ದರಿಂದ ಪ್ರಕರಣಕ್ಕೆ ತೆರೆ ಬಿದ್ದಂತಾಗಿದೆ. ಸ್ವಪಕ್ಷದ ಪಟ್ಟಣ ಪಂಚಾಯತ್ ಸದಸ್ಯನ ಪರ ವಕಾಲತು ವಹಿಸಿದ ಕಿತ್ತೂರು ಮಾಜಿ ಶಾಸಕ ಮಹಾಂತೇಶ ದೊಡಗೌಡರ ಅವರು ಕೋಟ್ ಧರಿಸಿ ಕೋರ್ಟ್ ಗೆ ಆಗಮಿಸಿದ್ದು ಗಮನ ಸೆಳೆಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next