Advertisement

ಕಲಘಟಗಿಯ ಮಾಜಿ ಶಾಸಕ ಸಿ.ಎಂ.ನಿಂಬಣ್ಣನವರ ನಿಧನ

02:34 PM Jul 09, 2023 | Team Udayavani |

ಹುಬ್ಬಳ್ಳಿ: ಕಲಘಟಗಿಯ ಮಾಜಿ ಶಾಸಕ ಸಿ.ಎಂ. ನಿಂಬಣ್ಣನವರ ರವಿವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

Advertisement

ಮಾಜಿ ಶಾಸಕ ಸಿ.ಎಂ. ನಿಂಬಣ್ಣನವರ ಅನಾರೋಗ್ಯ ಪೀಡಿತರಾಗಿದ್ದು ಕೆಲದಿನಗಳಿಂದ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಮಧ್ಯಾಹ್ನ ನಿಧನರಾಗಿದ್ದಾರೆ.

ಸಿ.ಎಂ. ನಿಂಬಣ್ಣವರ ಹಲವು ವರ್ಷಗಳಿಂದ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದು, 2018ರಲ್ಲಿ ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು.

2023ರ ಚುನಾವಣೆಯಲ್ಲಿ ಬಿಜೆಪಿ ಅವರಿಗೆ ಟಿಕೆಟ್ ನಿರಾಕರಿಸಿ ಕಾಂಗ್ರೆಸ್ ನಿಂದ ಆಗಮಿಸಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಚಬ್ಬಿ ಅವರಿಗೆ ಟಿಕೆಟ್ ನೀಡಿತ್ತು.

ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿಯಿಂದ ಹೊರಬಂದು ಕೆಜೆಪಿ ಪಕ್ಷ ಸ್ಥಾಪಿಸಿದಾಗ ಅವರೊಂದಿಗೆ ಗುರುತಿಸಿಕೊಂಡಿದ್ದರು.

Advertisement

2023ರ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿರಾಕರಿಸಿದರಿಂದ ತೀವ್ರವಾಗಿ ಅಸಮಾಧಾನಗೊಂಡಿದ್ದ ನಿಮ್ಮ ಪಕ್ಷೇತರರಾಗಿ ಸ್ಪರ್ಧೆ ಇಳಿಯುವುದಾಗಿ ಘೋಷಿಸಿದ್ದರಾದರೂ ನಂತರ ಪಕ್ಷದ ಹಿರಿಯರ ಸೂಚನೆ ಮೇರೆಗೆ ಸ್ಪರ್ಧೆಗಿಳಿಯದೆ ಪಕ್ಷದಲ್ಲಿಯೇ ಮುಂದುವರೆದಿದ್ದರು.

ಮೂಲತಃ ಶಿಕ್ಷಕ ವೃತ್ತಿಯವರಾಗಿದ್ದ ನಿಂಬಣ್ಣನವರ ರಾಜಕೀಯಕ್ಕೆ ಸೇರ್ಪಡೆಗೊಂಡು ಹಲವು ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿದ್ದರು.

ಸಿಎಂ ನಿಂಬಣ್ಣವರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ 3 ಗಂಟೆಗೆ ಕಲಘಟಗಿಯಲ್ಲಿ ನೆರವೇರಲಿದೆ ಎಂದು ಬಿಜೆಪಿ ಪಕ್ಷದ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next