Advertisement

ಮಾಜಿ ಶಾಸಕ ಉಮೇಶ್‌ ಭಟ್‌ ನಿಧನ

11:11 PM Aug 13, 2019 | Lakshmi GovindaRaj |

ಬೆಂಗಳೂರು: ಅಂಕೋಲಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಲೋಕಶಿಕ್ಷಣ ಟ್ರಸ್ಟ್‌ನ ಮಾಜಿ ಅಧ್ಯಕ್ಷರು, ಧರ್ಮದರ್ಶಿಗಳೂ ಆಗಿದ್ದ ಉತ್ತರ ಕನ್ನಡ ಜಿಲ್ಲೆಯ ಉಮೇಶ್‌ ಭಟ್‌ (72) ಮಂಗಳವಾರ ಸಂಜೆ ನಿಧನ ಹೊಂದಿದ್ದಾರೆ.

Advertisement

ಸ್ನೇಹಿತರ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಎದೆನೋವು ಕಾಣಿಸಿ ಕೊಂಡಿದ್ದು ತಕ್ಷಣವೇ ನಗರದ ಕೆಸಿ ಜನರಲ್‌ ಆಸ್ಪತ್ರೆಗೆ ದಾಖಲಿಸ ಲಾಯಿತಾ ದರೂ ಚಿಕಿತ್ಸೆ ಫ‌ಲಕಾರಿಯಾಗದೆ ಕೊನೆ  ಯುಸಿರೆಳೆದರು. ಉಮೇಶ್‌ ಭಟ್‌ ಅವರು ಪತ್ನಿ ಸವಿತಾ ಸೇರಿ ಅಪಾರ ಬಂಧು ಬಳಗ ಅಗಲಿದ್ದಾರೆ.

ಸ್ನೇಹಮಯಿ ವ್ಯಕ್ತಿತ್ವದ ಉಮೇಶ್‌ ಭಟ್‌, ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾವಿಕೆರೆ ಗ್ರಾಮದವರು. 1989ರಲ್ಲಿ ಅಂಕೋಲಾ ಕ್ಷೇತ್ರದಿಂದ ವಿಧಾನಸಭೆ ಪ್ರವೇಶಿಸಿದ್ದರು. ಕೆಪಿಸಿಸಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next