Advertisement

ಹಿರಿಯ ಹೋರಾಟಗಾರ, ಮಾಜಿ ಸಂಸದ ಜಿ.ಮಾದೇಗೌಡ ನಿಧನ

09:07 PM Jul 17, 2021 | Team Udayavani |

ಮಂಡ್ಯ: ರೈತ ಹಿತರಕ್ಷಣೆ ವೇದಿಕೆ ಅಧ್ಯಕ್ಷ, ಹಿರಿಯ ಹೋರಾಟಗಾರ, ಮಾಜಿ ಸಂಸದ ಜಿ.ಮಾದೇಗೌಡ ಅವರು ಶನಿವಾರ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.

Advertisement

94 ವರ್ಷ ವಯಸ್ಸಿನ ಜಿ.ಮಾದೇಗೌಡರು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು. ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯತ್ತಿದ್ದ ಅವರು ಇಂದು ನಿಧನರಾಗಿದ್ದಾರೆ.

1980ರ ದಶಕದಲ್ಲಿ ಆರ್​ ಗುಂಡೂರಾವ್​ ಅವರ ಮಂತ್ರಿ ಮಂಡಲದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದ ಮಾದೇಗೌಡರು ಮಂಡ್ಯದ ಅಂದಿನ ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಮಂಡ್ಯ ಲೋಕಸಭಾ ಕ್ಷೇತ್ರದಿಂದ 1989 ಮತ್ತು 1991ರಲ್ಲಿ ಎರಡು ಬಾರಿ ಆಯ್ಕೆಗೊಂಡಿದ್ದರು.

ಕಾವೇರಿ ಹೋರಾಟ ಸೇರಿದಂತೆ ಹಲವಾರು ರೈತ ಪರ ಹೋರಾಟಗಳಲ್ಲಿ ಮಾದೇಗೌಡರು ಸಕ್ರಿಯರಾಗಿದ್ದರು

Advertisement

Udayavani is now on Telegram. Click here to join our channel and stay updated with the latest news.

Next