Advertisement

ಮಾಜಿ ಸಂಸದ ಸಾಂಗ್ಲಿಯಾನ ಕಾಂಗ್ರೆಸ್‌ಗೆ ಗುಡ್‌ಬೈ

12:26 AM Apr 09, 2019 | Team Udayavani |

ಬೆಂಗಳೂರು: ಮಾಜಿ ಸಚಿವ ಜೆ.ಅಲೆಗ್ಸಾಂಡರ್‌ ನಂತರ ಇದೀಗ ಮಾಜಿ ಸಂಸದ ಎಚ್‌.ಟಿ.ಸಾಂಗ್ಲಿಯಾನ ಕಾಂಗ್ರೆಸ್‌ ಉಪಾಧ್ಯಕ್ಷ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

Advertisement

ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿಯವರಿಗೆ ರಾಜೀನಾಮೆ ಪತ್ರ ರವಾನಿಸಿರುವ ಅವರು, ರಾಜ್ಯದ 28 ಕ್ಷೇತ್ರಗಳ ಪೈಕಿ ಒಂದೇ ಒಂದು ಕ್ಷೇತ್ರದಲ್ಲೂ ಕ್ರಿಶ್ಚಿಯನ್‌ ಸಮುದಾಯಕ್ಕೆ ಅವಕಾಶ ನೀಡದ ಬಗ್ಗೆ ನನಗೆ ನೋವಾಗಿರುವ ಕಾರಣ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ರಾಜ್ಯದ ನಾಯಕತ್ವ ಹಾಗೂ ಹೈಕಮಾಂಡ್‌ ಕ್ರೈಸ್ತ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಿದೆ. 2008ರಿಂದ ಪಕ್ಷಕ್ಕೆ ದುಡಿದ ನನ್ನನ್ನು ಗುರುತಿಸಿಲ್ಲ ಎಂದು ರಾಜೀನಾಮೆ ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಸಚಿವ ಜೆ.ಅಲೆಗ್ಸಾಂಡರ್‌ ಅವರನ್ನು ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರು ಭೇಟಿ ಮಾಡಿ ಸಮಾಧಾನಪಡಿಸಿ, ಪಕ್ಷ ತೊರೆಯದಂತೆ ಮನವೊಲಿಸಿದ್ದರು. ಇದರ ಬೆನ್ನಲ್ಲೇ ಸಾಂಗ್ಲಿಯಾನ ರಾಜೀನಾಮೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next