Advertisement

BJP; ಮರಳಿ ಬಿಜೆಪಿ ಸೇರಿದ ಮಾಜಿ ಸಂಸದ ಶಿವರಾಮೇಗೌಡ

03:28 PM Apr 05, 2024 | Team Udayavani |

ಕೊಪ್ಪಳ: ಹತ್ತು ವರ್ಷಗಳ ಹಿಂದೆ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಸಂಸದ ಶಿವರಾಮೇಗೌಡ ಅವರು ಶುಕ್ರವಾರ ಮರಳಿ ಬಿಜೆಪಿಗೆ ಸೇರ್ಪಡೆಯಾದರು.

Advertisement

ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಸಮ್ಮುಖದಲ್ಲಿ ಸೇರ್ಪಡೆಯಾದರು.

ಶಿವರಾಮೇಗೌಡ ಅವರು 2009 ರಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಅಭೂತ ಪೂರ್ವ ಗೆಲುವು ಕಂಡಿದ್ದರು. ಆದರೆ 2014 ರಲ್ಲಿ ಅವರಿಗೆ ಬಿಜೆಪಿ ಎಂಪಿ ಟಿಕೆಟ್ ಕೈ ತಪ್ಪಿತ್ತು. ಇದರಿಂದ ಮುನಿಸಿಕೊಂಡು ಕಾಂಗ್ರೆಸ್ ಸೇರಿದ್ದರು. ಕಳೆದ 10 ವರ್ಷ ಕಾಂಗ್ರೆಸ್ ನಲ್ಲಿ ಸಂಘಟನೆ ಕೆಲಸ ಮಾಡಿದ್ದರು. ಈಗ ಮತ್ತೆ ಬಿಜೆಪಿಗೆ ಮರಳಿದ್ದಾರೆ.

ಪಕ್ಷಕ್ಕೆ ಸ್ವಾಗತಿಸಿದ ಸಮಯದಲ್ಲಿ ಮಾಜಿ ಸಿಎಂ ಬಿಎಸ್ವೈ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಆರ್.ಅಶೋಕ್, ಸಿ.ಟಿ ರವಿ ಸೇರಿ ಹಲವು ನಾಯಕರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next