Advertisement

ಕೇಂದ್ರ ಪರಿಹಾರ ನೀಡದ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡ ಅಸಮಾಧಾನ

11:45 PM Aug 15, 2019 | Lakshmi GovindaRaj |

ಬೆಂಗಳೂರು: ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ಪ್ರವಾಹ ಉಂಟಾಗಿದ್ದು, ಕೇಂದ್ರ ಸರ್ಕಾರ ಇದುವರೆಗೂ ಪರಿಹಾರಕ್ಕೆ ಒಂದು ರೂಪಾಯಿಯನ್ನೂ ಬಿಡುಗಡೆ ಮಾಡದಿರುವುದು ಸರಿಯಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಜೆಡಿಎಸ್‌ ಕಚೇರಿಯಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜತೆ ಮಾತನಾಡಿ, ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ತುರ್ತು ಗಮನಹರಿಸಬೇಕಿತ್ತು. ಸಂಪುಟ ಸಭೆ ನಡೆಸಿ ತೀರ್ಮಾನ ಕೈಗೊಳ್ಳಬೇಕಿತ್ತು ಎಂದು ಹೇಳಿದರು. ರಾಜ್ಯಕ್ಕೆ ಪರಿಹಾರ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಏನು ಕಷ್ಟ ಇದೆಯೋ ಗೊತ್ತಿಲ್ಲ.

ಈಗಾಗಲೇ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದೇನೆ. ಅಗತ್ಯ ಬಿದ್ದರೆ ಮತ್ತೂಂದು ಪತ್ರವನ್ನೂ ಬರೆಯುತ್ತೇನೆಂದು ತಿಳಿಸಿದರು. ಕೇಂದ್ರ ಗೃಹ ಸಚಿವರೂ ಆದ ಅಮಿತ್‌ ಶಾ ಬಂದು ಹೋಗಿದ್ದಾರೆ. ವಿತ್ತ ಸಚಿವರೂ ಇಲ್ಲಿನ ಪರಿಸ್ಥಿತಿ ನೋಡಿದ್ದಾರೆ. ಪ್ರಧಾನಿ ನರೇಂದ್ರಮೋದಿ ಅವರಿಗೆ ಮನವರಿಕೆ ಮಾಡಿಕೊಟ್ಟು ಪರಿಹಾರ ಕೊಡಿಸಬಹುದಿತ್ತು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next