Advertisement

ಪ್ರಾಣಿ ಸಂಗ್ರಹಾಲಯ ಅಭಿವೃದ್ಧಿಗೆ ಹೆಚ್ಚು ಒತ್ತು

12:15 PM Jan 07, 2019 | |

ಬೆಳಗಾವಿ: ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಪ್ರಾಣಿ ಉದ್ಯಾನದಲ್ಲಿರುವ ಪ್ರಾಣಿ ಸಂಗ್ರಹಾಲಯವನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಅರಣ್ಯ ಮತ್ತು ಪರಿಸರ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.

Advertisement

ತಾಲೂಕಿನ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಪ್ರಾಣಿ ಸಂಗ್ರಹಾಲಯದಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ವತಿಯಿಂದ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ರವಿವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿ, ಪ್ರಾಣಿ ಸಂಗ್ರಹಾಲಯವನ್ನು ಮಾದರಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು. ಈ ಭಾಗದಲ್ಲಿಯೇ ಅತ್ಯುತ್ತಮ ಸಂಗ್ರಹಾಲಯ ಇದಾಗಲಿದೆ. ಈಗಾಗಲೇ ರಾಜ್ಯ ಸರ್ಕಾರ ಅನುದಾನ ನೀಡುವ ಮೂಲಕ ಅಭಿವೃದ್ಧಿಗೆ ಕೈ ಜೋಡಿಸುತ್ತಿದೆ. ಇನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕ್ರಮವಾಗಿ ಕೆಲವು ಯೋಜನೆಗಳನ್ನು ಹಾಕಿಕೊಳ್ಳಲಾಗುವುದು. ಪ್ರವಾಸಿಗರನ್ನು ಸಂಗ್ರಹಾಲಯದತ್ತ ಸೆಳೆಯುವ ಪ್ರಯತ್ನ ಸರಕಾರದ್ದಾಗಿದೆ ಎಂದರು.

ಪ್ರಾಣಿ ಸಂಗ್ರಹಾಲಯಕ್ಕಾಗಿ 1.85 ಕಿ.ಮೀ. ಉದ್ದ ಹಾಗೂ 8 ಅಡಿ ಎತ್ತರದ ತಡೆ ಗೋಡೆ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರ ಎರಡು ಕೋಟಿ ರೂ. ಮಂಜೂರಾಗಿದೆ. ಮತ್ತೆ ಕ್ರಮವಾಗಿ ಅರಣ್ಯ ಇಲಾಖೆಯಿಂದ ಅನುದಾನವನ್ನು ಬಿಡುಗಡೆಗೊಳಿಸಲಾಗುವುದು. ಈ ಭಾಗದ ಎಲ್ಲ ಜನರಿಗೂ ಈ ಉದ್ಯಾನವನ ಪ್ರಶಾಂತ ತಾಣವಾಗಿ ರೂಪಿತವಾಗಲಿದೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಇಲ್ಲಿ ಯಾವ ಅಭಿವೃದ್ಧಿ ಕೈಗೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುವುದು ಎಂದರು.

ಈ ವೇಳೆ ಸಂಸದ ಸುರೇಶ ಅಂಗಡಿ, ಮೇಯರ್‌ ಬಸಪ್ಪ ಚಿಕ್ಕಲದಿನ್ನಿ, ಜಿಲ್ಲಾಧಿಕಾರಿ ಡಾ| ಎಸ್‌.ಬಿ. ಬೊಮ್ಮನಹಳ್ಳಿ, ಪಾಲಿಕೆ ಆಯುಕ್ತ ಶಶಿಧರ ಕುರೇರ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪಿ.ಬಿ. ಕರುಣಾಕರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ವಿ. ಅಮರನಾಥ ಸೇರಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು, ಅರಣ್ಯ ರಕ್ಷಕರು ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

ಭೂತರಾಮನಹಟ್ಟಿಗೆ ಎರಡು ಹುಲಿ
ಭೂತರಾಮನಹಟ್ಟಿ ಪ್ರಾಣಿ ಸಂಗ್ರಹಾಲಯ ಬೆಳೆಸುವ ಉದ್ದೇಶದಿಂದ ಮೊದಲ ಹಂತದಲ್ಲಿ ಎರಡು ಹುಲಿಗಳನ್ನು ತರಿಸಲಾಗುವುದು. ಪ್ರವಾಸಿ ತಾಣವನ್ನಾಗಿ ಮಾಡುವ ಮೂಲಕ ಇದನ್ನು ಅಭಿವೃದ್ಧಿಪಡಿಸಲಾಗುವುದು. ಎರಡು ಹುಲಿಗಳನ್ನು ಬಿಟ್ಟು ಟೈಗರ್‌ ಸಫಾರಿ ಮಾಡಲಾಗುವುದು. ಜತೆಗೆ 18 ವಿವಿಧ ಪ್ರಕಾರದ ಪ್ರಾಣಿಗಳನ್ನು ಸಂಗ್ರಹಾಲಯದಲ್ಲಿ ಇರಿಸಲಾಗುವುದು. ಉದ್ಯಾನ ಮತ್ತು ಪ್ರಾಣಿ ಸಂಗ್ರಹಾಲಯಕ್ಕೆ ಕುಡಿಯುವ ನೀರು ಪೂರೈಸಲು ಮಾರ್ಕಂಡೇಯ ನದಿಯಿಂದ ನೀರು ಒದಗಿಸಲಾಗುವುದು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next