Advertisement

ಬಂಗಾಳದಲ್ಲಿ ಹಿಂಸಾಚಾರ;ನಾಲ್ವರು ಬಿಜೆಪಿ ಕಾರ್ಯಕರ್ತರ ಹತ್ಯೆ

09:14 AM Jun 10, 2019 | Vishnu Das |

ಕೋಲ್ಕತ್ತಾ: ಪಶ್ಚಿಮ ಬಂಗಾಳದಬಸೀರ್‌ ಹಾಟ್‌ನ ಸಂದೇಶ್‌ ಕಾಲಿ ಪ್ರದೇಶದಲ್ಲಿ ಶನಿವಾರ ಬಿಜೆಪಿ ವಿಜಯೋತ್ಸವ ಹಿಂಸಾಚಾರಕ್ಕೆ ತಿರುಗಿದ್ದು ನಾಲ್ವರು ಬಿಜೆಪಿ ಮತ್ತು ಓರ್ವ ಟಿಎಂಸಿ ಕಾರ್ಯಕರ್ತನ ಹತ್ಯೆಯಾಗಿದೆ.

Advertisement

ಉಭಯ ಪಕ್ಷಗಳ ಕಾರ್ಯಕರ್ತರು ಧ್ವಜಗಳನ್ನು ನೆಡುವ ವಿಚಾರದಲ್ಲಿ ಘರ್ಷಣೆಗಿಳಿದಿದ್ದು ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

ಸ್ಥಳಕ್ಕೆ ಹೆಚ್ಚುವರಿ ಪಪೊಲೀಸರನ್ನು ಕರೆಸಿಕೊಂಡು ಭದ್ರತೆ ಕೈಗೊಳ್ಳಲಾಗಿದೆ.

ಬಿಜೆಪಿ ನಾಯಕ ಮುಕುಲ್‌ ರಾಯ್‌ ಅವರು ನಮ್ಮ ನಾಲ್ವರು ಕಾರ್ಯಕರ್ತರು ಹತ್ಯೆಯಾಗಿದ್ದಾರೆ. ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಉಗ್ರವಾದವನ್ನ ಬಿತ್ತುತ್ತಿದ್ದಾರೆ. ನಾವು ಗೃಹ ಸಚಿವ ಅಮಿತ್‌ ಶಾ ಅವರಿಗೆ ಪರಿಸ್ಥಿತಿ ಕುರಿತಾಗಿ ಸಂದೇಶ ಕಳುಹಿಸಿದ್ದೇವೆ ಎಂದು ತಿಳಿಸಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next