Advertisement

ಎರಡೇ ಕೊಠಡಿಗಳಲ್ಲಿ ನಾಲ್ಕು ತರಗತಿ ಮಕ್ಕಳಿಗೆ ಪಾಠ

03:02 PM Dec 22, 2019 | Team Udayavani |

ಕನಕಗಿರಿ: ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರ ಸಾವಿರಾರು ಕೋಟಿ ರೂ. ವೆಚ್ಚ ಮಾಡುತ್ತಿದೆ. ಆದರೆ ಶಿಕ್ಷಣಕ್ಕೆ ಪೂರಕವಾದ ವಾತಾವರಣವನ್ನು ಒದಗಿಸದೇ ಇರುವುದರಿಂದ ಎರಡು ಕೊಠಡಿಗಳಲ್ಲಿ ನಾಲ್ಕು ತರಗತಿಗಳನ್ನು ನಡೆಸಬೇಕಾದ ಪರಿಸ್ಥಿತಿ ಸಮೀಪದ ಗೋಡಿನಾಳ ಗ್ರಾಮದ ಸ.ಕಿ.ಪ್ರಾ. ಶಾಲೆಯಲ್ಲಿ ನಿರ್ಮಾಣವಾಗಿದೆ.

Advertisement

ಶಾಲೆಯಲ್ಲಿ 1ರಿಂದ 5 ತರಗತಿಯವರೆಗೆ ಒಟ್ಟು 130 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ಶಾಲೆಯಲ್ಲಿ ಮೂರು ಕೊಠಡಿಗಳು ಮಾತ್ರ ಇದ್ದು, ಎರಡು ಕಟ್ಟಡದಲ್ಲಿ ನಾಲ್ಕು ತರಗತಿಗಳನ್ನು ನಡೆಲಾಗುತ್ತಿದೆ. ಇನ್ನೂಳಿದ ಒಂದು ತರಗತಿಯನ್ನು ಕಾರ್ಯಾಲಯಕ್ಕೆ ಬಳಸುತ್ತಿದ್ದು, ಇದೇ ಕಾರ್ಯಾಲಯದಲ್ಲಿ 5ನೇ ತರಗತಿ ವಿದ್ಯಾರ್ಥಿಗಳಿಗೆ ಪಾಠ ಬೋಧನೆ ಮಾಡಲಾಗುತ್ತಿದೆ. ಇದು ಕೂಡ ಶಿಥಿಲಾವಸ್ಥೆ ತಲುಪಿದೆ. ಕೊಠಡಿಗಳ ಕೊರತೆಯಿಂದ ಮಕ್ಕಳ ತಾವು ಯಾವ ತರಗತಿ ಕಲಿಯುತ್ತಿವೆ ಎಂಬ ಗೊಂದಲದಲ್ಲಿದ್ದಾರೆ. ಮೂರು ಕೊಠಡಿಗಳ ಅವಶ್ಯಕತೆ ಇದ್ದು, ಮಕ್ಕಳ ಸಂಖ್ಯೆ ಹೆಚ್ಚಿರುವುದರಿಂದ ಶಾಲಾ ಆವರಣದಲ್ಲಿ ಪಾಠ ಬೋಧನೆ ಮಾಡಲಾಗುತ್ತಿದೆ.

ಮನವಿಗೆ ಸ್ಪಂದನೆ ಇಲ್ಲ: ಶಾಲೆಯಲ್ಲಿ ಕೊಠಡಿ ಕೊರತೆ ಬಗ್ಗೆ ಶಿಕ್ಷಣ ಇಲಾಖೆ ಮತ್ತು ಜನಪ್ರತಿನಿಧಿಗಳಿಗೆ ಹಲವಾರು ಬಾರಿ ಮುಖ್ಯ ಶಿಕ್ಷಕರು ಹಾಗೂ ಗ್ರಾಮಸ್ಥರು ಮನವಿ ಮಾಡಿದರೂ ಯಾವುದೇ ಸ್ಪಂದನೆ ಇಲ್ಲದಂತಾಗಿದೆ. ಕೊಠಡಿಗಳ ನಿರ್ಮಾಣಕ್ಕಾಗಿ ಗ್ರಾಮಸ್ಥರು ದೇಣಿಗೆ ಸಂಗ್ರಹಿಸಿ ಜಾಗೆ ಖರೀದಿಸಿದ್ದಾರೆ. ಆದರೆ ಕೊಠಡಿ ಕೊರತೆ ಬಗ್ಗೆ ಪ್ರತಿ ವರ್ಷ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಶಾಸಕ ಬಸವರಾಜ ದಢೇಸುಗೂರು ಅವರು ಇತ್ತೀಚೆಗೆ ನವಲಿ ಗ್ರಾಮದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಕ್ಷೇತ್ರದ ವ್ಯಾಪ್ತಿಯ ಶಾಲೆಗಳಲ್ಲಿ ಕೊಠಡಿ ಕೊರತೆ ಕಂಡುಬಂದರೆ ಮಾಹಿತಿ ಒದಗಿಸಿದರೆ ಸಮಸ್ಯೆ ನಿವಾರಿಸಲಾಗುವುದು ಎಂಬ ಭರವಸೆ ನೀಡಿದ್ದರು. ಆದರೆ ಶಾಸಕರು ನೀಡಿದ ಭರವಸೆ ಕಾರ್ಯ ರೂಪಕ್ಕೆ ಬಂದಿಲ್ಲ. ಶಾಸಕರ ಮಾತಿನಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಶಾಲೆಯಲ್ಲಿರುವ ಕೊಠಡಿಗಳ ಕೊರತೆಯ ಬಗ್ಗೆ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಆದರೂ ಕೊಠಡಿಗಳ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ. ಕೂಡಲೇ ಅಧಿಕಾರಿಗಳು ಹಾಗೂ ಶಾಸಕರು ಇತ್ತ ಗಮನ ಹರಿಸಿ ಕೊಠಡಿಗಳು ಸಮಸ್ಯೆ ಪರಿಹರಿಸಬೇಕಾಗಿದೆ. -ವೀರೇಶ, ವಿದ್ಯಾರ್ಥಿಗಳು ಪಾಲಕರು

 

Advertisement

-ಶರಣಪ್ಪ ಗೋಡಿನಾಳ

Advertisement

Udayavani is now on Telegram. Click here to join our channel and stay updated with the latest news.

Next