Advertisement

ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ ಎರಡು ಸಾವು ನಾಲ್ವರು ಗಂಭೀರ 

08:21 AM Jul 14, 2018 | Harsha Rao |

ಬೆಳಗಾವಿ: ಬೆಳಗಾವಿಯಿಂದ ಉಡುಪಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪಿದ್ದು ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ಬಡೇಕೋಳ ಮಠದ ಬಳಿ ಶನಿವಾರ ಮುಂಜಾನೆ ಸಂಭವಿಸಿದೆ. 

Advertisement

ಉಡುಪಿ ಡಿಪೋಗೆ ಸೇರಿದ  KA.19.F.3077 ಬಸ್ಸು ಬೆಳಗಾವಿಯಿಂದ ಉಡುಪಿಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ  ಎಂದು ತಿಳಿದುಬಂದಿದೆ. 

ಅಪಘಾತದಲ್ಲಿ ಮೃತಪಟ್ಟವರ ವಿವರ ಇನ್ನಷ್ಟೇ ತಿಳಿದುಬರಬೇಕಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next