Advertisement

ನಾಲ್ವರು ಐಪಿಎಸ್‌ ಅಧಿಕಾರಿಗಳಿಗೆ ಮುಂಬಡ್ತಿ

01:26 AM Jan 25, 2019 | |

ಬೆಂಗಳೂರು: ರಾಜ್ಯದ ನಾಲ್ವರು ಐಪಿಎಸ್‌ ಅಧಿಕಾರಿಗಳಿಗೆ ಡೆಪ್ಯೂಟಿ ಇನ್ಸ್‌ಪೆಕ್ಟರ್‌ ಜನರಲ್‌ ಆಫ್ ಪೊಲೀಸ್‌ (ಡಿಐಜಿಪಿ) ಹುದ್ದೆಗೆ ಮುಂಬಡ್ತಿ ನೀಡಿರುವ ರಾಜ್ಯ ಸರ್ಕಾರ ಮುಂಬಡ್ತಿ ಹೊಂದಿರುವ ಅಧಿಕಾರಿಗಳಿಗೆ ಹೊಸ ಸ್ಥಾನಗಳಿಗೆ ವರ್ಗಾವಣೆಗೊಳಿಸಿ ಗುರುವಾರ ಆದೇಶ ಹೊರಡಿಸಿದೆ.

Advertisement

ಬಿ.ಎಸ್‌.ಲೋಕೇಶ್‌ ಕುಮಾರ್‌, ಕೆ.ಟಿ ಬಾಲಕೃಷ್ಣ, ಪಿ.ರಾಜೇಂದ್ರ ಪ್ರಸಾದ್‌, ಆರ್‌. ರಮೇಶ್‌ ಡಿಐಜಿಪಿ ಹುದ್ದೆಗೆ ಮುಂಬಡ್ತಿ ಹೊಂದಿದವರು. ಹುಬ್ಬಳ್ಳಿ- ಧಾರವಾಡ ಪೊಲೀಸ್‌ ಆಯುಕ್ತರಾಗಿ ಬಿ.ಎಸ್‌.ಲೋಕೇಶ್‌ ಕುಮಾರ್‌, ಮೈಸೂರು ಪೊಲೀಸ್‌ ಆಯುಕ್ತರಾಗಿ ಕೆ.ಟಿ ಸುಬ್ರಹ್ಮಣ್ಯ, ಬೆಳಗಾವಿ ವಲಯದ ಆಯುಕ್ತರಾಗಿ ಪಿ.ರಾಜೇಂದ್ರ ಪ್ರಸಾದ್‌, ಯೋಜನೆ ಹಾಗೂ ಆಧುನೀಕರಣ ವಿಭಾಗದ ಡಿಐಜಿಪಿ ಆಗಿ ಆರ್‌.ರಮೇಶ್‌ ಅವರನ್ನು ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next