Advertisement

ಬಿಜೆಪಿ ಸೇರಲು ಕೋಲಾರದ ನಾಲ್ವರು ಶಾಸಕರ ಆಸಕ್ತಿ!

09:41 PM May 23, 2019 | Lakshmi GovindaRaj |

ಕೋಲಾರ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿಗಳು ಹೀನಾಯವಾಗಿ ಸೋತ ಬೆನ್ನಲ್ಲೇ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಶಾಸಕರು ಬಿಜೆಪಿ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ.

Advertisement

ಮೈತ್ರಿಗಾಗಿರುವ ಮುಖಭಂಗದಿಂದಾಗಿ ಸರಕಾರದ ಭವಿಷ್ಯ ತೂಗುಯ್ನಾಲೆಯಲ್ಲಿದ್ದು, ಕೋಲಾರ ಜಿಲ್ಲೆಯ ನಾಲ್ವರು ಶಾಸಕರು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ.

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿದ್ದ ಕೆ.ಎಚ್‌.ಮುನಿಯಪ್ಪ ಅವರನ್ನು ಸೋಲಿಸಲು ಪಣ ತೊಟ್ಟು, ಬಿಜೆಪಿ ಗೆಲುವಿಗೆ ಸಹಕರಿಸಿದ ಕೋಲಾರದ ಜೆಡಿಎಸ್‌ ಶಾಸಕ ಕೆ.ಶ್ರೀನಿವಾಸ ಗೌಡ, ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್‌. ನಾಗೇಶ್‌ ನೇರವಾಗಿ ಬಿಜೆಪಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ನ ಇನ್ನಿಬ್ಬರು ಪ್ರಭಾವಿ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ. ಫ‌ಲಿತಾಂಶ ಪ್ರಕಟ ವಾಗುತ್ತಿದ್ದಂತೆ, ಶಾಸಕ ಶ್ರೀನಿವಾಸಗೌಡ, ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿಯನ್ನು ತಬ್ಬಿ ಅಭಿನಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next