Advertisement

ರಾಜ್ಯದಲ್ಲಿ ಇನ್ನೂ ಮೂರ್‍ನಾಲ್ಕು ದಿನ ಮಳೆ

11:15 PM Aug 19, 2019 | Team Udayavani |

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರ್‍ನಾಲ್ಕು ದಿನಗಳು ಸಾಧಾರಣದಿಂದ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಹಾಗೂ ಆಗಸ್ಟ್‌ 21 ಮತ್ತು 22ರಂದು ಕರಾವಳಿಯಲ್ಲಿ ಭಾರೀ ಮಳೆ ಆಗಲಿದೆ. ಉತ್ತರ ಒಳನಾಡಿನಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ತಿಳಿಸಿದೆ.

Advertisement

ಪಕ್ಕದ ತಮಿಳುನಾಡಿನಲ್ಲಿ ಚಂಡಮಾರುತದ ಪರಿಚಲನೆ ಹಾಗೂ ರಾಜ್ಯದ ಕರಾವಳಿ ಮತ್ತು ಕೇರಳ ನಡುವೆ ಕಡಿಮೆ ಒತ್ತಡದ ತಗ್ಗು (ಆಫ್ಶೋರ್ಡ್ ಟ್ರಫ್) ಜತೆಗೆ ಉತ್ತರ ಭಾರತದಲ್ಲಿ ಉಂಟಾದ ಹವಾಮಾನದಲ್ಲಿನ ಬದಲಾವಣೆ ರಾಜ್ಯದಲ್ಲಿ ಮಳೆ ಸುರಿಸುತ್ತಿದೆ. ಬೆಂಗಳೂರು ಸೇರಿ ಹಲವೆಡೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next