Advertisement

ನಿಜಾಮುದ್ದೀನ್ ನಿಂದ ಬಂದ ನಾಲ್ವರಿಗೆ ಸೋಂಕು: ಬೆಳಗಾವಿಯಲ್ಲಿ ಮತ್ತೆ ನಾಲ್ಕು ಹೊಸ ಪ್ರಕರಣ

06:38 PM Apr 05, 2020 | keerthan |

ಬೆಳಗಾವಿ: ಜಿಲ್ಲೆಯಲ್ಲಿ ಭಾನುವಾರ ಮತ್ತೆ ನಾಲ್ಕು ಜನರಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದ್ದು ಇದರಿಂದ ಜಿಲ್ಲೆಯಲ್ಲಿ ಸೋಂಕು ತಗುಲಿದವರ ಸಂಖ್ಯೆ ಏಳಕ್ಕೇರಿದೆ.

Advertisement

ಭಾನುವಾರ ಒಂದೇ ದಿನ ನಾಲ್ವರಿಗೆ ಕೋವಿಡ್-19 ಸೋಂಕು ತಗುಲಿರುವುದು ತೀವ್ರ ಆತಂಕ ಉಂಟು ಮಾಡಿದೆ. ಕೋವಿಡ್-19 ಸೋಂಕು ತಗುಲಿದವರು ನಾಲ್ವರೂ ರಾಯಬಾಗ ತಾಲೂಕಿಗೆ ಸೇರಿದವರಾಗಿದ್ದು ಇವರೆಲ್ಲರೂ ದೆಹಲಿ ನಿಜಾಮುದ್ದೀನ್ ಮರ್ಕಜ್ ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದರು.

ಕೋವಿಡ್ 19 ಸೋಂಕು ದೃಢಪಟ್ಟವರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ ಎಂದು ರಾಜ್ಯ ಸರಕಾರ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

ನಾಲ್ವರಿಗೆ ಕೋವಿಡ್-19 ಸೋಂಕು ತಗುಲಿದ ಕಾರಣ ರಾಯಬಾಗ ತಾಲೂಕಿನಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next