Advertisement

Ullal: ಬೋಳಿಯಾರ್‌ ಚೂರಿ ಇರಿತ ನಾಲ್ವರು ಪೊಲೀಸ್‌ ಕಸ್ಟಡಿಗೆ

10:43 PM Jun 13, 2024 | Team Udayavani |

ಉಳ್ಳಾಲ: ಬಿಜೆಪಿ ವಿಜಯೋತ್ಸವದ ಸಂದರ್ಭದಲ್ಲಿ ಬೋಳಿಯಾರ್‌ನಲ್ಲಿ ನಡೆದ ಚೂರಿ ಇರಿತಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಎಲ್ಲ 13 ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಹೆಚ್ಚಿನ ತನಿಖೆಯ ನಿಟ್ಟಿನಲ್ಲಿ ನಾಲ್ವರನ್ನು ಪೊಲೀಸ್‌ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

Advertisement

ಬೋಳಿಯಾರ್‌ನಲ್ಲಿ ಬಿಜೆಪಿ ವಿಜಯೋತ್ಸವದ ವಿಚಾರದಲ್ಲಿ ಮಸೀದಿ ಬಳಿ ಘೋಷಣೆ ಕೂಗಿದ ವಿಚಾರದಲ್ಲಿ  ಬಿಜೆಪಿ ಕಾರ್ಯಕರ್ತರಾದ ಹರೀಶ್‌ ಧರ್ಮನಗರ ಮತ್ತು ನಂದನ್‌ಗೆ ಚೂರಿ ಇರಿಯಲಾಗಿತ್ತು.  ಘಟನೆಗೆ ಸಂಬಂಧಿಸಿದಂತೆ 13 ಮಂದಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಹೆಚ್ಚಿನ ತನಿಖೆ ನಿಟ್ಟನಲ್ಲಿ ಆರೋಪಿಗಳಾದ ಸರ್ವನ್‌, ತಾಜುದ್ದೀನ್‌, ಅಶ್ರಫ್‌, ಮತ್ತು ಮುಬಾರಕ್‌ನನ್ನು ಪೊಲೀಸ್‌ ಕಸ್ಟಡಿಗೆ ಒಪ್ಪಿಸುವಂತೆ ಕೊಣಾಜೆ ಪೊಲೀಸರು ಸಲ್ಲಿಸಿದ ಅರ್ಜಿಯಂತೆ ನಾಲ್ವರನ್ನು  ಪೊಲೀಸ್‌ ಕಸ್ಟಡಿಗೆ ನ್ಯಾಯಾಲಯ ಒಪ್ಪಿಸಿದೆ.

ಬೋಳಿಯಾರ್‌ನಲ್ಲಿ ಭದ್ರತೆಯನ್ನು ಮುಂದುವರಿಸಿದ್ದು, ಕೊಣಾಜೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next