Advertisement

Scam: ಕುರಿ ವಿತರಣೆ ಯೋಜನೆಯಲ್ಲಿ ಹಗರಣ… ತೆಲಂಗಾಣ ನಾಲ್ವರು ಸರ್ಕಾರಿ ಅಧಿಕಾರಿಗಳು ಅರೆಸ್ಟ್

11:26 AM Feb 23, 2024 | Team Udayavani |

ಹೈದರಾಬಾದ್: ಕುರಿ ವಿತರಣೆ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನಾಲ್ವರು ಸರ್ಕಾರಿ ಅಧಿಕಾರಿಗಳನ್ನು ಬಂಧಿಸಿದೆ.

Advertisement

ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ದುರ್ಬಳಕೆ ಪ್ರಕರಣದ ತನಿಖೆಯ ಭಾಗವಾಗಿ ಈ ಬಂಧನಗಳು ನಡೆದಿವೆ ಎಂದು ಹೇಳಲಾಗಿದೆ.

ಬಂಧಿತರಲ್ಲಿ ಸಹಾಯಕ ನಿರ್ದೇಶಕರಾದ ಡಿ ರವಿ ಮತ್ತು ಎಂ ಆದಿತ್ಯ ಕೇಶವ ಸಾಯಿ, ಜಿಲ್ಲಾ ಅಂತರ್ಜಲ ಅಧಿಕಾರಿ ಶ್ರೀ ಪಸುಲ ರಘುಪತಿ ರೆಡ್ಡಿ ಮತ್ತು ವಯಸ್ಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶ್ರೀ ಸಂಗು ಗಣೇಶ್ ಸೇರಿದ್ದಾರೆ.

ಈ ನಾಲ್ವರು ಅಧಿಕಾರಿಗಳು ವಂಚನೆಯ ಬೇನಾಮಿ ಖಾತೆಗಳನ್ನು ನಿರ್ಮಿಸಲು ಖಾಸಗಿ ಸಂಸ್ಥೆಗಳೊಂದಿಗೆ ಕೆಲಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ, ಇದರ ಪರಿಣಾಮವಾಗಿ ಸುಮಾರು 2.10 ಕೋಟಿ ಸರ್ಕಾರದ ಹಣವನ್ನು ದುರುಪಯೋಗಪಡಿಸಲಾಗಿದೆ.

ಸರಕಾರದ ಬೊಕ್ಕಸಕ್ಕೆ ದೊಡ್ಡ ಮಟ್ಟದ ಆರ್ಥಿಕ ನಷ್ಟ ಉಂಟುಪಡಿಸಿದ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದ್ದು ಸದ್ಯ ಬಂಧಿತರನ್ನು ವಿಶೇಷ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದೆ.

Advertisement

ಇದನ್ನೂ ಓದಿ: ದೇವಸ್ಥಾನದ ಉತ್ಸವದ ವೇಳೆ ಸಿಪಿಎಂ ಕಾರ್ಯಕರ್ತನ ಬರ್ಬರ ಹತ್ಯೆ… ಇಂದು ಬಂದ್ ಗೆ ಕರೆ

Advertisement

Udayavani is now on Telegram. Click here to join our channel and stay updated with the latest news.

Next