Advertisement

ಹುಮನಾಬಾದ್ : ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ನೀರುಪಾಲು

02:49 PM Oct 03, 2021 | Team Udayavani |

ಹುಮನಾಬಾದ್ : ತಾಲೂಕಿನ ಘೋಡವಾಡಿ ಗ್ರಾಮದ ಇಸ್ಮಾಯಿಲ್ ಖಾದ್ರಿ ದರ್ಗಾ ಹತ್ತಿರದ ಕೆರೆಯಲ್ಲಿ ಈಜಲು  ತೆರಳಿದ್ದ ನಾಲ್ವರು ನೀರು ಪಾಲಾದ ಅವಘಡ ಭಾನುವಾರ ಸಂಭವಿಸಿದೆ.

Advertisement

ಹೈದ್ರಾಬಾದ್ ಬೊರಾಬಂಡಾ ನಿವಾಸಿಗಳಾದ ಸೈಯದ್ ಅಕ್ಬರ್ ಸೈಯದ್ ಉಸ್ಮಾನ್ (17), ಮಹಮದ್ ಜುಲೇದ್ ಖಾನ್( 19), ಮಹಮದ್ ಫಾದಖಾನ್ ಸಲೀಂ ಖಾನ್ (18) ಮತ್ತು ಸೈಯದ್ ಜುನೇದ್ ಸೈಯದ್ ಖಾಲೆದ್ (15) ನೀರುಪಾಲದವರೆಂದು ತಿಳಿದುಬಂದಿದೆ . ನಾಲ್ವರ ಪೈಕಿ ಸೈಯದ್ ಅಕ್ಬರ್ ಶವ ಪತ್ತೆಯಾಗಿದ್ದು, ಉಳಿದವರ ಶವಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆ ಹುಮನಾಬಾದ್ ಪೊಲೀಸ್ ಠಾಣೆಯ ಪಿಎಸ್ಐ ರವಿಕುಮಾರ್ ನಾಯ್ಕೋಡಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳಿಯರ ಸಹಕಾರದಿಂದ ಶವಗಳ ಪತ್ತೆಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಅವಘಡದ ಮಾಹಿತಿ ಹಬ್ಬುತ್ತಿದ್ದಂತೆ ಕೆರೆಯ ಸುತ್ತ ನೂರಾರು ಜನ ಜಮಾಯಿಸಿದ್ದಾರೆ. . ಘೋಡವಾಡಿ ಗ್ರಾಮದ ಇಸ್ಮೈಲ್ ಖಾದ್ರಿ ಈ ಭಾಗದ ಪ್ರಸಿದ್ಧ ದರ್ಗಾವಾಗಿದ್ದು, ಪ್ರತಿ ಗುರುವಾರ ಹೆಚ್ಚಿನ ಸಂಖ್ಯೆಯ ಜನರು ಇಲ್ಲಿ ದರ್ಶನಕ್ಕೆ ಆಗಮಿಸುತ್ತಾರೆ. ರಾಜ್ಯ ಸೇರಿದಂತೆ ನೆರೆ ರಾಜ್ಯಗಳ ಭಕ್ತರು ಕೂಡ ಇಲ್ಲಿಗೆ ಆಗಮಿಸುತ್ತಾರೆ. ಈಜಲು ಹೋದ ಯುವಕರು ಕೂಡ ದರ್ಗಾ ದರ್ಶನಕ್ಕೆ ಬಂದಿದ್ದರು ಎಂದು ಮಾಹಿತಿ ಲಭ್ಯವಾಗಿದೆ.

Advertisement

ಹುಮನಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next