Advertisement

ನಕಲಿ ದಾಖಲೆ ಸೃಷ್ಟಿಸಿ ವಂಚನೆ : 8 ವರ್ಷಗಳ ಕಠಿನ ಸಜೆ ನೀಡಿದ ನ್ಯಾಯಾಲಯ

11:35 PM Nov 02, 2022 | Team Udayavani |

ಕಾಸರಗೋಡು: ಜಿಲ್ಲಾ ಪಂಚಾಯತ್‌ ರಸ್ತೆ ನಿರ್ಮಾಣ ಕೆಲಸಕ್ಕೆ ನಕಲಿ ದಾಖಲೆ ಸೃಷ್ಟಿಸಿ ಸರಕಾರಕ್ಕೆ ಸಲ್ಲಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಎರಡನೇ ಆರೋಪಿ ಎರ್ನಾಕುಳಂ ಮೂವಾಟ್ಟುಪುಳ ಎನ್‌ಜಿಒ ಕ್ವಾರ್ಟರ್ಸ್‌ ಸಮೀಪದ ನಿವಾಸಿ ಪಿ.ಬಿ. ಕಬೀರ್‌ ಖಾನ್‌ (60)ಗೆ ಕಾಸರಗೋಡು ಸಿಜೆಎಂ ನ್ಯಾಯಾಲಯ ಎಂಟು ವರ್ಷಗಳ ಕಠಿನ ಸಜೆ ಹಾಗೂ 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

Advertisement

ದಂಡ ಪಾವತಿಸದಿದ್ದಲ್ಲಿ 15 ತಿಂಗಳ ಹೆಚ್ಚುವರಿ ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಿದೆ.

ಇದೇ ಪ್ರಕರಣದಲ್ಲಿ ಒಂದನೇ ಆರೋಪಿ ಚೆರ್ಕಳ ಚಾಂಬಲಕ ರಸ್ತೆ ಬಳಿಯ ನಿವಾಸಿ ಮೊಹಮ್ಮದ್‌ ರಫೀಕ್‌ (42) ವಿಚಾರಣೆ ಸಂದರ್ಭ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಆತನಿಗೆ ನ್ಯಾಯಾಲಯ ವಾರಂಟ್‌ ಹೊರಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next