Advertisement

Fraud ನಕಲಿ ಭೂ ದಾಖಲೆ ಪತ್ರ ಸಲ್ಲಿಸಿ ವಂಚನೆ: ಯೂತ್‌ ಕಾಂಗ್ರೆಸ್‌ ಮುಖಂಡ ಸೆರೆ

11:58 PM Oct 06, 2023 | Team Udayavani |

ಕಾಸರಗೋಡು: ಜಮೀನಿನ ನಕಲಿ ದಾಖಲು ಪತ್ರಗಳನ್ನು ಸಲ್ಲಿಸಿ ಕೆಎಸ್‌ಎಫ್‌ಇಯ ಮಾಲಕಲ್ಲು ಶಾಖೆಯಿಂದ 70 ಲಕ್ಷ ರೂ. ಸಾಲ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಯೂತ್‌ ಕಾಂಗ್ರೆಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಹೊಸದುರ್ಗ ಚಿತ್ತಾರಿ ಪಿ.ವಿ. ರಸ್ತೆಯ ಕೆ.ವಿ.ಹೌಸ್‌ನ ಎಂ. ಇಸ್ಮಾಯಿಲ್‌ (37)ನನ್ನು ರಾಜಪುರಂ ಪೊಲೀಸರು ಬಂಧಿಸಿದ್ದಾರೆ.

Advertisement

ಈ ಪ್ರಕರಣದಲ್ಲಿ ಇಸ್ಮಾಯಿಲ್‌ ಸಹಿತ 8 ಮಂದಿ ವಿರುದ್ಧ ರಾಜಪುರಂ ಪೊಲೀಸರು ಕೇಸು ದಾಖಲಿಸಿದ್ದಾರೆ. ಉಪ್ಪಳ ಗ್ರಾಮದ ಐದು ಎಕ್ರೆ ಜಮೀನಿನ ದಾಖಲು ಪತ್ರಗಳನ್ನು ನಕಲಿಯಾಗಿ ಸೃಷ್ಟಿಸಿ ಅದಕ್ಕೆ ಗ್ರಾಮಾಧಿಕಾರಿಯ ಡಿಜಿಟಲ್‌ ಸಹಿ ಹಾಕಿ ನೀಡಿ ಕೆಎಸ್‌ಎಫ್‌ಇ ಚಿಟ್‌ ಫಂಡ್‌ನಿಂದ ಆರೋಪಿಗಳು 70 ಲಕ್ಷ ರೂ. ಸಾಲ ಪಡೆದು ವಂಚಿಸಿದ್ದಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು.

ಸಾಲವನ್ನು ಮರುಪಾವತಿಸದೆ ಇದ್ದಾಗ ಆರೋಪಿಗಳು ಸಲ್ಲಿಸಿದ ಭೂದಾಖಲು ಪತ್ರಗಳನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಅದು ನಕಲಿ ಎಂಬುದು ತಿಳಿದು ಬಂದಿದೆ ಎಂದು ಕೆಎಸ್‌ಎಫ್‌ಇಯ ಶಾಖಾ ಮೆನೇಜರ್‌ ಪೊಲೀಸರಿಗೆ ದೂರು ನೀಡಿದ್ದರು. ಇದರಂತೆ ಪೊಲೀಸರು ಕೇಸು ದಾಖಲಿಸಿ ಬಂಧಿಸಿದ್ದಾರೆ.

ಇತರ ಆರೋಪಿಗಳ ಬಂಧನಕ್ಕೆ ಶೋಧ ನಡೆಯುತ್ತಿದೆ. ಬಂಧಿತ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next