Advertisement

ಉಡುಪಿ: ಮುದ್ರಾ ಲೋನ್‌ ಹೆಸರಿನಲ್ಲಿ ವ್ಯಕ್ತಿಗೆ 2 ಲಕ್ಷ ರೂ. ವಂಚನೆ

09:47 PM Nov 25, 2022 | Team Udayavani |

ಉಡುಪಿ : ಮುದ್ರಾ ಲೋನ್‌ ಹೆಸರಿನಲ್ಲಿ ಸಾಲ ಕೊಡುವುದಾಗಿ ವ್ಯಕ್ತಿಯೊಬ್ಬರಿಗೆ 2 ಲಕ್ಷ ರೂ.ವರೆಗೆ ವಂಚಿಸಿದ ಘಟನೆ ನಡೆದಿದೆ.

Advertisement

ಜಿಲ್ಲೆಯ ನಿವಾಸಿ ಸತೀಶ್‌ ಜೈನ್‌ ಅವರಿಗೆ ಅಪರಿಚಿತನೊರ್ವ ಮುದ್ರಾ ಲೋನ್‌ ಸಂಸ್ಥೆಯ ಮ್ಯಾನೇಜರ್‌ ಎಂದು ಕರೆ ಮಾಡಿ ಮುದ್ರಾ ಲೋನ್‌ ನೀಡುವುದಾಗಿ ತಿಳಿಸಿದ್ದ. ಲೋನ್‌ಗೆ ಸಂಬಂಧಿಸಿ ದಾಖಲೆಗಳನ್ನು ಪಡೆದು, ನೋಂದಣಿ ಶುಲ್ಕ 3,200 ರೂ. ಜಮೆ ಮಾಡುವಂತೆ ತಿಳಿಸಿದ್ದ. ಶುಲ್ಕ ಪಾವತಿಸಿದ ಅನಂತರ ಪ್ರೊಸೆಸ್‌ ಚಾರ್ಜ್‌, ಇನ್ಸುರೆನ್ಸ್‌ ಚಾರ್ಜ್‌, ಎನ್‌ಒಸಿ, ಆರ್‌ಬಿಐ ಟ್ಯಾಕ್ಸ್‌ ಎಂದು ನಂಬಿಸಿ ಹಣ ಕಟ್ಟುವಂತೆ ತಿಳಿಸಿದ್ದ. ಸತೀಶ್‌ ಜೈನ್‌ ಅವರು ನ. 3ರಿಂದ ನ. 11ರ ವರೆಗೆ ಹಂತ-ಹಂತವಾಗಿ 2,38,420 ರೂ. ಹಣವನ್ನು ಪಾವತಿಸಿ ವಂಚನೆಗೊಳಗಾಗಿದ್ದಾರೆ. ಈ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಮತದಾರರ ಪಟ್ಟಿಯ ಅಕ್ರಮ; ಇಬ್ಬರ ಅಮಾನತು: ಪರಿಶೀಲನೆಗೆ ಆಯೋಗ ನಿರ್ದೇಶನ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next