Advertisement

Fraud Case ; ಚೈತ್ರಾ ಸೇರಿ 7 ಮಂದಿಗೆ ಅ. 6ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

05:17 PM Sep 23, 2023 | Team Udayavani |

ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಸೇರಿ 7 ಮಂದಿ ಆರೋಪಿಗಳ ನ್ಯಾಯಾಂಗ ಬಂಧನವನ್ನು ಬೆಂಗಳೂರಿನ 3 ನೇ ಎಪಿಎಂಸಿ ನ್ಯಾಯಾಲಯ ಅಕ್ಟೊಬರ್ 6 ರ ವರೆಗೆ ವಿಸ್ತರಿಸಿದೆ.

Advertisement

ಚೈತ್ರಾ ಜತೆಗೆ ಇತರ ಪ್ರಮುಖ ಆರೋಪಿಗಳಾದ ಅಭಿನವ ಹಾಲಶ್ರೀ, ಶ್ರೀಕಾಂತ್, ಗಗನ್, ರಮೇಶ್, ಪ್ರಜ್ವಲ್ ಮತ್ತು ಧನರಾಜ್ ಸಹಿತ 7 ಮಂದಿ ಆರೋಪಿಗಳನ್ನು ಸೆಪ್ಟೆಂಬರ್ 13 ರಂದು ನ್ಯಾಯಾಲಯ 10 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಪೊಲೀಸ್‌ ಕಸ್ಟಡಿ ಅಂತ್ಯಗೊಂಡ ಕಾರಣ ಶನಿವಾರ ಅವರನ್ನು ಕೋರ್ಟ್‌ಗೆ ಹಾಜರುಪಡಿಸಲಾಯಿತು.

ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರು ಚೈತ್ರಾ ಮತ್ತು ಇತರ ಎಂಟು ಮಂದಿ ವಿರುದ್ಧ ಬೆಂಗಳೂರಿನ ಬಂಡೆಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಚೈತ್ರಾ ಮತ್ತು ಆಕೆಯ ಸಹಚರರು ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ದೊರಕಿಸಿ ಕೊಡುವ ನೆಪದಲ್ಲಿ 5 ಕೋಟಿ ರೂ. ಹಣ ಪಡೆದು ವಂಚಿಸಿದ್ದಾರೆ ಎಂಬ ಆರೋಪ ಮಾಡಲಾಗಿದೆ.

ಚೈತ್ರಾ ಮತ್ತು ತಂಡ ಸಿಸಿಬಿ ತನಿಖಾಧಿಕಾರಿ ಎದುರು ತಪ್ಪೊಪ್ಪಿಗೆ ಹೇಳಿಕೆ ನೀಡಿದೆ ಎಂದು ಮೂಲಗಳು ತಿಳಿಸಿವೆ.ಈ ಮಧ್ಯೆ ಚೈತ್ರಾ ಸಹಿತ ಎಲ್ಲರ ಹೇಳಿಕೆಗಳನ್ನೂ ವೀಡಿಯೋ ಚಿತ್ರೀಕರಿಸಿಕೊಳ್ಳಲಾಗಿದೆ. ಇಡೀ ವಂಚನೆಯ ಸಂಚನ್ನು ಗಗನ್‌, ಹಾಲಶ್ರೀ ಸ್ವಾಮೀಜಿ, ಶ್ರೀಕಾಂತ್‌ ಪೂಜಾರಿ ಹಾಗೂ ತಾನು ಸೇರಿ ರೂಪಿಸಿದ್ದು, ಇತರರಿಗೆ ಹಣದ ಆಮಿಷವೊಡ್ಡಿ ಸಹಾಯ ಪಡೆದುಕೊಂಡಿದ್ದೇವೆ ಅಷ್ಟೇ ಎಂದು ಚೈತ್ರಾ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next