Advertisement

ಸರ್ಕಾರಿ ಕೆಲಸ ಕೊಡಿಸುವುದಾಗಿ ವಂಚನೆ: ಆರೋಪಿ ಬಂಧನ

05:32 AM Jul 03, 2020 | Lakshmi GovindaRaj |

ಬೆಂಗಳೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚನೆ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರ ಹೊಸಹಳ್ಳಿ ಬಂಧಿತ ಆರೋಪಿ. ಆರೋಪಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಅಮಾಯಕ  ಯುವಕರನ್ನು ನಂಬಿಸಿ ಲಕ್ಷಾಂತರ ರೂ. ಪಡೆದು ವಂಚನೆ ಮಾಡುತ್ತಿದ್ದ.

Advertisement

ಈ ದೂರುಗಳು ಬಂದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಶಿವಕುಮಾರ,  ಪ್ರಭಾವಿ ರಾಜಕೀಯ ನಾಯ ಕರು ಹೆಸರುಗಳನ್ನು ಬಳಕೆ ಮಾಡಿಕೊಂಡು ಅವರಿಗೆ ಆಪ್ತ ಎಂದು ನಂಬಿಸುತ್ತಿದ್ದ. ನಂಬಿದ ಯುವಕರು ಹಣ ನೀಡಿ ಮೋಸ ಹೋಗುತ್ತಿದ್ದರು.

ಅಷ್ಟೇ ಅಲ್ಲದೆ ಲೋಕೋಪಯೋಗಿ ಸೇರಿ ಹಲವು ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸಿದ ಸಲುವಾಗಿ ಬರಬೇಕಾದ ಬಾಕಿ ಮೊತ್ತ ಬಿಡುಗಡೆ ಮಾಡಿಸುತ್ತೇನೆ ಎಂದು ನಂಬಿಸಿಯೂ ಹಲವಾರು ಮಂದಿ ಬಳಿ ಲಕ್ಷಾಂತರ ರೂ.ಪಡೆದು ವಂಚಿಸಿರುವುದು ತನಿಖೆಯಲ್ಲಿ ಗೊತ್ತಾ ಗಿದೆ ಎಂದು ಹಿರಿಯ  ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next