Advertisement
ಬನಶಂಕರಿ ನಿವಾಸಿ ಪ್ರವೀಣ್ (27), ನಾಗರ ಭಾವಿ ನಿವಾಸಿ ಚೇತನ್(33) ಮತ್ತು ದೊಮ್ಮಲೂರು ನಿವಾಸಿ ಮನೋಜ್ ಕುಮಾರ್ (46) ಬಂಧಿತರು. ವಿಜಯ್ಕುಮಾರ್ ಎಂಬಾತ ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.
Related Articles
Advertisement
ಅದಕ್ಕಾಗಿ 10 ಲಕ್ಷ ರೂ. ಕೊಡಬೇಕೆಂದು ಬೇಡಿಕೆ ಇಟ್ಟಿದ್ದರು. ಬಳಿಕ ಅರವಿಂದ್ ಇತರೆ ಇಬ್ಬರು ಅಧಿಕಾರಿಗಳ ಜತೆ ಚರ್ಚಿಸಿ, ಆರೋಪಿಗಳಿಗೆ ಸದಾಶಿವ ನಗರದ ಹೋಟೆಲ್ವೊಂದರಲ್ಲಿ 10 ಲಕ್ಷ ರೂ. ನೀಡಿದ್ದರು. ಕೆಲ ದಿನಗಳ ನಂತರ ಆರೋಪಿಗಳಿಗೆ ಎಸಿಬಿಯಲ್ಲಿ ಯಾವುದೇ ಅಧಿಕಾರಿಗಳು ಪರಿಚಯವಿಲ್ಲ ಎಂಬುದು ಗೊತ್ತಾಗಿದೆ. ಹಣ ವಾಪಸ್ಗೆ ಕರೆ ಮಾಡಿದಾಗ, ಬೆದರಿಕೆ ಹಾಕಿದ್ದಾರೆ. ನಂತರ ಫೋನ್ ಸ್ವಿಚ್x ಆಫ್ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಅರವಿಂದ್ ದೂರು ನೀಡಿದ್ದರು. ಮೂವರ ಬಂಧಿಲಾಗಿದೆ. ಮತ್ತೂಬ್ಬನಿಗಾಗಿ ಶೋಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಕೆಐಎಡಿಬಿ ಅಧಿಕಾರಿಗೂ ವಂಚನೆ
ಮತ್ತೂಂದು ಪ್ರಕರಣದಲ್ಲಿ ಎಸಿಬಿ ದಾಳಿಗೊಳಗಾಗಿದ್ದ ಕೆಐಎಡಿಬಿ ಅಧಿಕಾರಿಯೊಬ್ಬರಿಗೆ ಪ್ರಕರಣದಲ್ಲಿ ಆರೋಪ ಮುಕ್ತಗೊಳಿಸುವುದಾಗಿ ನಂಬಿಲಿ ಒಂದೂವರೆ ಲಕ್ಷ ರೂ. ಪಡೆದುಕೊಂಡಿದ್ದ ಆರೋಪಿ ಯನ್ನು ಬಂಧಿಸಲಾಗಿದೆ. ಸ್ಥಳೀಯ ನಿವಾಸಿ ಧರ್ಮೇಂದ್ರ (35) ಬಂಧಿತ. ಇತ್ತೀಚೆಗೆ ಕೆಐಎಡಿಬಿ ಅಧಿಕಾರಿಯೊಬ್ಬರ ಮೇಲೆ ದಾಳಿ ನಡೆಸಲಾಗಿತ್ತು. ಅವರನ್ನು ಸಂಪರ್ಕಿಸಿದ ಧರ್ಮೇಂದ್ರ ಒಂದೂವರೆ ಲಕ್ಷ ರೂ. ನೀಡಿದರೆ ಆರೋಪ ಮುಕ್ತಗೊಳಿಸಲು ಸಹಾಯ ಮಾಡುತ್ತೇನೆ ಎಂದು ಹಣ ಪಡೆದುಕೊಂಡು ವಂಚಿಸಿದ್ದ ಎಂದು ಪೊಲೀಸರು ಹೇಳಿದರು.
ಹಣಕ್ಕೆ ಬೇಡಿಕೆ ಇಟ್ಟರೆ ಮಾಹಿತಿ ನೀಡಿ
ಈ ರೀತಿಯ ವಂಚನೆಗಳ ಬಗ್ಗೆ ಸರ್ಕಾರಿ ಅಧಿಕಾರಿಗಳು ಮತ್ತು ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಎಸಿಬಿ ಮನವಿ ಮಾಡಿದೆ. ಇತ್ತೀಚೆಗೆ ಎಸಿಬಿ ಹೆಸರಿನಲ್ಲಿ ಕೆಲ ವ್ಯಕ್ತಿಗಳು ಎಸಿಬಿ ದಾಳಿಗೊಳಗಾದ ಅಧಿಕಾರಿಗಳನ್ನು ಸಂಪರ್ಕಿಸಿ, ಪ್ರಕರಣದಲ್ಲಿ ಸಹಾಯ ಮಾಡುವುದಾಗಿ ನಂಬಿಸಿ ವಂಚಿಸುತ್ತಿದ್ದಾರೆ. ಹೀಗಾಗಿ ಸರ್ಕಾರಿ ಅಧಿಕಾರಿಗಳು ಇಂತಹ ವ್ಯಕ್ತಿಗಳ ಬಗ್ಗೆ ಜಾಗೃತರಾಗಿರಬೇಕು. ಯಾರಾದರೂ ಅಪರಿಚಿತ ವ್ಯಕ್ತಿಗಳು ಹಣಕ್ಕೆ ಬೇಡಿಕೆ ಇಟ್ಟರೆ ಕಚೇರಿಗೆ ಮಾಹಿತಿ ನೀಡುವಂತೆ ಎಸಿಬಿ ಅಧಿಕಾರಿಗಳು ಮನವಿ ಮಾಡಿದ್ದಾರೆ. ಕೆಲ ದಿನಗಳ ಹಿಂದೆ ನಿರ್ಮಿತಿ ಕೇಂದ್ರದ ಅಧಿಕಾರಿಯೊಬ್ಬರಿಗೆ ಅಪರಿಚಿತ ವ್ಯಕ್ತಿಯೊಬ್ಬ ಎಸಿಬಿಯಲ್ಲಿ ದೂರು ನೀಡುವುದಾಗಿ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸಿಬಿ ತಿಳಿಸಿದೆ