Advertisement

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

11:52 AM Oct 06, 2024 | Team Udayavani |

ಮಹದೇವಪುರ: ಅನಧಿಕೃತವಾಗಿ ಚೀಟಿ ವ್ಯವಹಾರ ಮಾಡಿ ನೂರಾರು ಮಂದಿಗೆ ಕೋಟ್ಯಂತರ ರೂ.ವಂಚಿಸಿದ್ದ ಒಂದೇ ಕುಟುಂಬದ ಮೂವರನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಕಾಡುಗೋಡಿಯ ಬೆಳತ್ತೂರಿನಲ್ಲಿ ವಾಸವಾಗಿದ್ದ ಮಹದೇವಮ್ಮ ಅಲಿಯಾಸ್‌ ಅಶಾ, ಪತಿ ಚಂದ್ರಶೇಖರ್‌ ಹಾಗೂ ಪುತ್ರ ಸಾಗರ್‌ ಎಂಬುವರನ್ನು ಬಂಧಿಸಲಾಗಿದೆ.

ತಲಕಾಡು ಮೂಲದ ಮಹದೇವಮ್ಮ ಕುಟುಂಬ 10 ವರ್ಷಗಳಿಂದ ಬೆಳತ್ತೂರಿನ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ಚಂದ್ರಶೇಖರ್‌ ಟೀವಿ ರಿಪೇರಿ ಕೆಲಸ ಮಾಡುತ್ತಿದ್ದರೆ, ಪತ್ನಿ ಗೃಹಿಣಿಯಾಗಿ ಚೀಟಿ ವ್ಯವಹಾರ ನಡೆಸುತ್ತಿದ್ದಳು. 1 ರಿಂದ 10 ಲಕ್ಷ ರೂ.ವ‌ರೆಗೆ ಚೀಟಿ ನಡೆಸುತ್ತಿದ್ದ ಮಹದೇವಮ್ಮ ನೂರಾರು ಕೂಲಿ ಕಾರ್ಮಿಕರು ಮತ್ತು ಬಡ ಜನರ ಬಳಿ ಕೋಟ್ಯಂತರ ರೂ. ಚೀಟಿ ಕಟ್ಟಿಸಿಕೊಂಡು ರಾತ್ರೋರಾತ್ರಿ ಪರಾರಿಯಾಗಿದ್ದರು. ಹಣ ಕಳೆದುಕೊಂಡವರು ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next