Advertisement

ಬ್ಯಾಂಕ್‌ ಅಧಿಕಾರಿ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ

12:48 AM Jul 30, 2022 | Team Udayavani |

ಉಡುಪಿ: ಆನ್‌ಲೈನ್‌ ಮೂಲಕ ವ್ಯಕ್ತಿಯೊಬ್ಬರ ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ.ಹಣ ಎಗರಿಸಿದ ಘಟನೆ ನಡೆದಿದೆ.

Advertisement

ಬೈಂದೂರಿನ ಮೊಹಮ್ಮದ್‌ ಅಕºರ್‌ ಅವರು ಬೈಂದೂರಿನಲ್ಲಿ ಎಸ್‌ಬಿಐನಲ್ಲಿ ಖಾತೆ ಹೊಂದಿದ್ದು, ಅವರಿಗೆ ಎ. 10ರಂದು ಪಾನ್‌ಕಾರ್ಡ್‌ ಅಪ್‌ಡೇಟ್‌ ಮಾಡಲು ಮೊಬೈಲ್‌ ಸಂದೇಶ ಬಂದಿತ್ತು.

ಅನಂತರ ಅಪರಿಚಿತ ವ್ಯಕ್ತಿಯೊಬ್ಬರು ಕರೆ ಮಾಡಿ ತಾನು ಬ್ಯಾಂಕ್‌ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಖಾತೆಯಿಂದ ಎ. 10ರಂದು 25,000 ರೂ. ಹಾಗೂ 1,25,000 ರೂ.ನಂತೆ ಒಟ್ಟು 1,50,000 ರೂ. ಹಣವನ್ನು ಆನ್‌ಲೈನ್‌ ಮೂಲಕ ವರ್ಗಾವಣೆ ಮಾಡಿ ನಷ್ಟ ಉಂಟು ಮಾಡಿದ್ದಾಗಿ ಉಡುಪಿ ಸೆನ್‌ ಅಪರಾಧ ಪೊಲೀಸ್‌ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next