Advertisement

ಶಾ, ನಡ್ಡಾ ಪರಿಚಯ ಎಂದು ಕೋಟಿ ಕೋಟಿ ವಂಚಿಸಿದ್ದ ‘ಯುವರಾಜ್’ಬಂಧನ

04:24 PM Dec 16, 2020 | keerthan |

ಬೆಂಗಳೂರು: ತಾನು ಆರ್ ಎಸ್ ಎಸ್ ಮುಖಂಡ, ತನಗೆ ಅಮಿತ್ ಶಾ, ಜೆಪಿ ನಡ್ಡಾ ಮುಂತಾದವರ ಪರಿಚಯವಿದೆ ಎಂದು ಹೇಳಿಕೊಂಡು ಜನರಿಗೆ ಕೋಟ್ಯಾಂತರ ರೂ. ವಂಚನೆ ಮಾಡಿದ ಆರೋಪದಲ್ಲಿ ಯುವರಾಜ್ ಎಂಬಾತನನ್ನು ಸಿಸಿಬಿ ಪೊಲೀಸರು ಇಂದು ಬಂಧಿಸಿದ್ದಾರೆ.

Advertisement

ಯುವರಾಜ್ ಅಲಿಯಾಸ್ ಸ್ವಾಮಿ ಎಂಬಾತ ಅನೇಕರಿಗೆ ವಂಚನೆ ನಡೆಸಿರುವ ಬಗ್ಗೆ ದೂರುಗಳು ಕೇಳಿಬಂದ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ಇಂದು ಆತನ ನಿವಾಸಕ್ಕೆ ದಾಳಿ ನಡೆಸಿದ್ದರು.

ಆರೋಪಿಯು ಪ್ರಮುಖ ರಾಜಕೀಯ ನಾಯಕರ ಜೊತೆ ಚಿತ್ರಗಳನ್ನು ತೆಗೆದುಕೊಂಡು, ತನಗೆ ಎಲ್ಲರ ಪರಿಚಯವಿದೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದ. ಇದೇ ರೀತಿ ಉದ್ಯಮಿಯೋರ್ವರಿಗೆ ಕೋಟ್ಯಾಂತರ ರೂ. ವಂಚಿಸಿದ್ದ ಎನ್ನಲಾಗಿದೆ.

ಉದ್ಯಮಿ ನೀಡಿದ ದೂರಿನ ಅನ್ವಯ ವಾರಂಟ್ ಪಡೆದು ಯುವರಾಜ್ ಅಲಿಯಾಸ್ ಸ್ವಾಮಿ ಮನೆಗೆ ದಾಳಿ ನಡೆಸಿದ ಸಿಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸಿ, ನಂತರ ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next