Advertisement

ಉಚಿತ ಬಸ್‌ ಪಾಸ್‌ ವಿತರಣೆಗೆ ಒತ್ತಾಯ

11:43 AM Jun 12, 2018 | Team Udayavani |

ಬೆಂಗಳೂರು: ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ವಿತರಿಸಲು ಒತ್ತಾಯಿಸಿ ಆಲ್‌ ಇಂಡಿಯಾ ಡೆಮಾಕ್ರೆಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌ ಮತ್ತು ಆಲ್‌ ಇಂಡಿಯಾ ಡೆಮಾಕ್ರೆಟಿಕ್‌ ಯೂತ್‌ ಆರ್ಗನೈಸೇಷನ್‌ ನೇತೃತ್ವದಲ್ಲಿ ವಿವಿಧ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಸೋಮವಾರ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಪ್ರತಿಭಟಿಸಿದರು.

Advertisement

ಈ ಹಿಂದೆ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ ಕೊಡುವುದಾಗಿ ಘೋಷಿಸಿದೆ. ಇಂದು ಪಕ್ಷ ಅಧಿಕಾರದಲ್ಲಿದ್ದರೂ ಪಾಸ್‌ ವಿತರಿಸಲು ಹಿಂದೇಟು ಹಾಕುತ್ತಿದೆ. ಈಗಾಗಲೇ ತರಗತಿಗಳು ಪ್ರಾರಂಭವಾಗಿದ್ದು, ಹೊಸ ಬಸ್‌ಪಾಸ್‌ ಸಿಗದೆ ಲಕ್ಷಾಂತರ ವಿದ್ಯಾರ್ಥಿಗಳು ಪ್ರಯಾಣಕ್ಕೆ ನೂರಾರು ರೂ. ವ್ಯಯಿಸುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ಸಮ್ಮಿಶ್ರ ಸರ್ಕಾರ ಕೂಡಲೇ ಉಚಿತ ಬಸ್‌ಪಾಸ್‌ ವಿತರಣೆಗೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸಂಘಟನೆ ಜಿಲ್ಲಾ ಕಾರ್ಯದರ್ಶಿ ಅಜಯ್‌ ಕಾಮತ್‌, ಜಯಣ್ಣ, ಶಾಂತ, ಅಜಯ್‌ ಕಾಮತ್‌, ಕೃಷ್ಣ, ರವಿನಂದನ್‌ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next