Advertisement

Free Bus Pass ಗ್ರಾಮೀಣ ಪತ್ರಕರ್ತರಿಗೆ 15 ದಿನದಲ್ಲಿ ಉಚಿತ ಬಸ್‌ಪಾಸ್‌: ಕೆ.ವಿ. ಪ್ರಭಾಕರ

11:45 PM Jul 28, 2024 | Team Udayavani |

ಬಾಗಲಕೋಟೆ: ಇನ್ನು 15 ದಿನಗಳಲ್ಲಿ ರಾಜ್ಯದ ಅರ್ಹ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌ ಯೋಜನೆ ಜಾರಿಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ ಹೇಳಿದರು.

Advertisement

ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಸಂದರ್ಭ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 6,500 ಗ್ರಾಮೀಣ ಪತ್ರಕರ್ತರಿದ್ದಾರೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಅದಕ್ಕೆ ತಗಲುವ ವೆಚ್ಚವನ್ನು ಸರಕಾರವೇ ಭರಿಸಲಿದೆ.

ಇನ್ನು 15ರಿಂದ 20 ದಿನಗಳಲ್ಲಿ ಈ ಕುರಿತು ಅಂತಿಮ ಆದೇಶ ಹೊರ ಬೀಳಲಿದೆ. ರಾಜ್ಯದ ಪತ್ರಕರ್ತರಿಗೆ ಉಚಿತ ಆರೋಗ್ಯ ಸೌಲಭ್ಯ ಕಲ್ಪಿಸಲು 10 ಕೋಟಿ ರೂ. ಮೀಸಲಿಡಲಾಗಿದೆ. ಆದರೆ ಸುವರ್ಣ ಆರೋಗ್ಯ ಟ್ರಸ್ಟ್‌ನ ಹಲವು ಷರತ್ತು ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ ಆ ಮೊತ್ತ ಈವರೆಗೂ ಖರ್ಚಾಗಿಲ್ಲ. ಆದ್ದರಿಂದ ಎಪಿಎಲ್‌/ಬಿಪಿಎಲ್‌ ಪಡಿತರ ಚೀಟಿ ಹೊಂದಿದ ಪತ್ರಕರ್ತರಿಗೆ ಮಾತ್ರ ಎಂಬ ಷರತ್ತನ್ನು ತೆಗೆದು ಹಾಕಲು ಮುಖ್ಯಮಂತ್ರಿಗೆ ವಿನಂತಿಸಲಾಗಿದೆ. ಆ ಕಾರ್ಯವೂ ಶೀಘ್ರವೇ ಆಗಲಿದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next