Advertisement

ಕೇರಳದ ಎಲ್ಲಾ ಜನರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುವುದು: ಪಿಣರಾಯಿ ವಿಜಯನ್

04:22 PM Dec 13, 2020 | Adarsha |

ತಿರುವನಂತಪುರ:  ಕೇರಳದ ಎಲ್ಲಾ ಜನರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುವುದು ಎಂದು  ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

Advertisement

ಶನಿವಾರ ಸುದ್ದಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್,  ಕೇಂದ್ರದಿಂದ ರಾಜ್ಯಕ್ಕೆ ಎಷ್ಟು ಲಸಿಕೆ ಲಭ್ಯವಿದೆ ಎಂಬುವುದು ಇನ್ನೂ ಸರಿಯಾಗಿ ತಿಳಿದಿಲ್ಲ. ಆದರೆ ಮಾಹಿತಿಗಳನ್ನು ತಿಳಿದುಕೊಂಡು ನಂತರ ರಾಜ್ಯದ ಪ್ರತಿಯೊಬ್ಬರಿಗೂ ಯಾವುದೆ ಹಣ ಪಡೆಯದೆ ಲಸಿಕೆ  ನೀಡಲಾಗುವುದು ಎಂದಿದ್ದಾರೆ.

ಈಗಾಗಾಲೇ ಮಧ್ಯಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳು, ತಮ್ಮ ಜನರಿಗಾಗಿ ಉಚಿತವಾಗಿ ಕೋವಿಡ್ ಲಸಿಕೆ ನೀಡುವುದಾಗಿ ನಿರ್ಧರಿಸಿದೆ ಎಂದ ಇವರು, ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖವಾಗಿದೆ. ಆದರೆ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿರುವುದರಿಂದ   ಸಂದರ್ಭದಲ್ಲಿ ಮತ್ತೆ ಸೋಂಕಿನ ಪ್ರಮಾಣ ಹೆಚ್ಚಳವಾಗುವ ಚಿಂತೆ ಎದುರಾಗಿದೆ ಎಂದಿದ್ದಾರೆ.

ಕೇರಳದಲ್ಲಿ ಸೋಂಕು ದಾಖಲಾದ ಮೊದಲ ಪ್ರಕರಣದಿಂದ ಆರಂಭಗೊಂಡು ಪ್ರತಿಯೊಬ್ಬ ಸೋಂಕಿತರಿಗೂ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೂ ಪ್ರತಿ ಜಿಲ್ಲೆಯಲ್ಲಿಯೂ ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದಂತೆ ಚಿಕಿತ್ಸಾ ಕೇಂದ್ರಗಳನ್ನು ತೆರೆಯಲಾಗಿದೆ. ಸೋಂಕಿಗೆ ಒಳಪಟ್ಟ ಪ್ರತಿಯೊಬ್ಬರಿಗೂ ಉಚಿತವಾಗಿ ಔಷಧಿ ಮತ್ತು ಆಹಾರದ ಸೇವೆಯನ್ನು ನೀಡಲಾಗುತ್ತಿದೆ ಎಂದು ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next