Advertisement

ಗೆಳೆಯರ ಬಳಗದಿಂದ ಉಚಿತ ಆರೋಗ್ಯ ಶಿಬಿರ

12:40 PM Aug 13, 2018 | Team Udayavani |

ಬೆಂಗಳೂರು: ಬೆಂಗಳೂರಿನಲ್ಲಿ ಮಾಲಿನ್ಯ ಪ್ರಮಾಣ ಹೆಚ್ಚಾಗಿದ್ದು, ನಗರದ ಪ್ರತಿಯೊಬ್ಬರೂ ಒಂದಲ್ಲ ಒಂದು ಕಾಯಿಲೆಯಿಂದ ಬಳಲುತ್ತಿದ್ದಾರೆ. ಆದರೆ, ಪ್ರತಿಯೊಬ್ಬರಿಗೂ ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಚಿಕಿತ್ಸೆ ಪಡೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಮಹಾಲಕ್ಷ್ಮೀಪುರ ವಾರ್ಡ್‌ ಪಾಲಿಕೆ ಸದಸ್ಯ ಕೇಶವ ಮೂರ್ತಿ ಹೇಳಿದ್ದಾರೆ.  

Advertisement

ಭಾನುವಾರ ಗೆಳೆಯರ ಬಳಗ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿದ ಅವರು, ನಗರದಲ್ಲಿನ ಬಡವರ ಅನುಕೂಲಕ್ಕಾಗಿ ಪ್ರತಿವರ್ಷ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗುವುದು. ಆ ಮೂಲಕ ಕಾಯಿಲೆ ಮುಕ್ತ ಸಮಾಜ ನಿರ್ಮಿಸಲಾಗುವುದು ಎಂದರು.  

ಕಾರ್ಯಕ್ರಮದಲ್ಲಿ ಬಿಬಿಎಂಪಿ ಆಡಳಿತ ಪಕ್ಷ ನಾಯಕ ಎಂ.ಶಿವರಾಜು, ಸಮಾಜ ಸೇವಕ ಮಹದೇವಪ್ಪ, ಕಾಂಗ್ರೆಸ್‌ ಮುಖಂಡರಾದ ನರಸಿಂಹಮೂರ್ತಿ, ಚಂದ್ರಶೇಖರ್‌ ಹಾಗೂ ಸತೀಶ್‌ ಸೇರಿದಂತೆ ಪ್ರಮುಖರು ಹಾಜರಿದ್ದರು.   

Advertisement

Udayavani is now on Telegram. Click here to join our channel and stay updated with the latest news.

Next