Advertisement

ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್‌ ಬ್ಯಾಗ್‌

09:34 AM Apr 24, 2019 | Lakshmi GovindaRaju |

ಬೆಂಗಳೂರು: ಡಾ.ರಾಜ್‌ಕುಮಾರ್‌ ಅವರ 90ನೇ ಜನ್ಮ ದಿನದ ವಿಶೇಷವಾಗಿ “ಭಾರತೀನಗರ ರೆಸಿಡೆಂಟ್ಸ್‌ ಫಾರ್ಮ್’ ಸಂಸ್ಥೆಯಿಂದ ಮಂಗಳವಾರ ಕಾಕ್ಸ್‌ಟೌನ್‌ನಲ್ಲಿ ನೂರಾರು ಬಡ ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್‌ ಬ್ಯಾಗ್‌ ವಿತರಿಸಲಾಯಿತು.

Advertisement

ಈ ವೇಳೆ ಮಾತನಾಡಿದ ಸ್ಮಿತಾರಾಕೇಶ್‌ ಸಿದ್ದರಾಮಯ್ಯ, ಬಡ ವರ್ಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯ ಮಾಡುತ್ತಿರುವುದು ಶ್ಲಾಘನೀಯ ಕೆಲಸ. ಬಡ ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವುದಕ್ಕಿಂತ ಒಳ್ಳೆಯ ಕೆಲಸ ಮತ್ತೂಂದಿಲ್ಲ. ಇದು ಎಲ್ಲರಿಗೂ ಮಾದರಿಯಾಗಬೇಕು ಎಂದರು.

ಭಾರತೀನಗರ ರೆಸಿಡೆಂಟ್ಸ್‌ ಫಾಮ್ಸ್‌ ಸಂಸ್ಥೆಯ ಅಧ್ಯಕ್ಷ ಎನ್‌.ಎಸ್‌.ರವಿ, ಕಳೆದ 20 ವರ್ಷಗಳಿಂದ ಸಾಮಾಜಿಕ ಕಳಕಳಿಯ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಈ ಸೇವೆ ಹೆಚ್ಚು ಸಂತೋಷವನ್ನು ಉಂಟುಮಾಡಿದೆ ಎಂದು ಹೇಳಿದರು.

ಕನ್ನಡಿಗರು ಎಂದಿಗೂ ಡಾ.ರಾಜ್‌ ಕುಮಾರ್‌ ಅವರನ್ನು ಮರೆಯಲು ಸಾಧ್ಯವಿಲ್ಲ. ಅವರು ಜನಮಾನಸದಲ್ಲಿ ಸದಾ ಹಸಿರಾಗಿದ್ದಾರೆ ಅವರ ಜನ್ಮದಿನಾಚರಣೆಯನ್ನು ಬಡ ಮಕ್ಕಳಿಗೆ ಉಚಿತ ಊಟ ಮತ್ತು ಲ್ಯಾಪ್‌ಟಾಪ್‌ ಬ್ಯಾಗ್‌ಗಳನ್ನು ನೀಡುವ ಮೂಲಕ ಭಿನ್ನವಾಗಿ ಆಚರಿಸಲಾಗುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next