Advertisement

ನವೆಂಬರ್‌ವರೆಗೆ ಉಚಿತ ಪಡಿತರ

01:31 AM Jun 24, 2021 | Team Udayavani |

ಹೊಸದಿಲ್ಲಿ: ಪ್ರಧಾನಮಂತ್ರಿ  ಗರೀಬ್‌ ಕಲ್ಯಾಣ್‌ ಅನ್ನ ಯೋಜನೆ (ಪಿಎಂಜಿಕೆಎವೈ) ಅನ್ವಯ ದೇಶದ ಕಡು ಬಡವರಿಗೆ ನೀಡುವ ಉಚಿತ ಪಡಿತರ ವ್ಯವಸ್ಥೆಯನ್ನು ಇನ್ನೂ ಐದು ತಿಂಗಳ ಕಾಲ ಮುಂದುವರಿಸಲಾಗುತ್ತದೆ.

Advertisement

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಈ ತೀರ್ಮಾನ ಪ್ರಕಟಿಸಲಾಗಿದೆ.

ಇದರಿಂದಾಗಿ ದೇಶದ 80 ಕೋಟಿ ಕಡು ಬಡವರಿಗೆ ನವೆಂಬರ್‌ ಅಂತ್ಯದವರೆಗೆ ಆಹಾರ ಧಾನ್ಯಗಳು ಲಭಿಸಲಿವೆ. ಸದ್ಯದ ವ್ಯವಸ್ಥೆ ಪ್ರಕಾರ ಮಾಸಾಂತ್ಯದ ವರೆಗೆ ಪಡಿತರ ವ್ಯವಸ್ಥೆ ಮೂಲಕ ಆಹಾರ ಧಾನ್ಯ ನೀಡಲು ತೀರ್ಮಾನಿಸಲಾಗಿತ್ತು. ಈ ತಿಂಗಳ ಆರಂಭದಲ್ಲಿ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿಯವರು ಮಾತನಾಡಿದ್ದ ವೇಳೆ, ದೀಪಾವಳಿ ವರೆಗೆ ಉಚಿತ ಆಹಾರಧಾನ್ಯವನ್ನು ವಿತರಿಸುವ ಬಗ್ಗೆ ಘೋಷಣೆ ಮಾಡಿದ್ದರು. ಅದನ್ನೇ ಸಂಪುಟ ಸಭೆಯಲ್ಲಿ ಅಂಗೀಕರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next