Advertisement

ಸ್ವಾತಂತ್ರ್ಯ ಹೋರಾಟಗಾರರಿಗೆ ರಾಜ್ಯಪಾಲರಿಂದ ಸನ್ಮಾನ

09:37 PM Aug 09, 2022 | Team Udayavani |

ಬೆಂಗಳೂರು: ಕ್ವಿಟ್‌ ಇಂಡಿಯಾ ದಿನಾಚರಣೆ ಹಾಗೂ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಅವರು ಮಂಗಳವಾರ ನಗರದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ಗೌರವಿಸಿದರು. ಕಂದಾಯ ಸಚಿವ ಆರ್‌.ಅಶೋಕ್‌ ಮತ್ತು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ, ಶಾಸಕ ಸತೀಶ್‌ ರೆಡ್ಡಿ ಅವರು ರಾಜ್ಯಪಾಲರಿಗೆ ಸಾಥ್‌ ನೀಡಿದರು.

Advertisement

ಜೆಪಿ ನಗರಕ್ಕೆ ತೆರಳಿದ ರಾಜ್ಯಪಾಲರು ನಾಲ್ಕನೇ ಹಂತದ ಆಶ್ರಯ ಅಪಾರ್ಟ್‌ ಮೆಂಟ್‌ನಲ್ಲಿ ವಾಸವಾಗಿರುವ ಆರ್‌.ನಾರಾಯಣಪ್ಪ ಅವರ ಮನೆಗೆ ತೆರಳಿ ಸಿಹಿ ತಿನ್ನಿಸಿ ಸನ್ಮಾನಿಸಿದರು. ಬಳಿಕ ಬನಶಂಕರಿ 3ನೇ ಹಂತದಲ್ಲಿರುವ ಶಂಕರನಾರಾಯಣ ರಾವ್‌ ಅವರ ಮನೆಗೆ ತೆರಳಿ ಗೌರವಿಸಿ, ಆರೋಗ್ಯ ವಿಚಾರಿಸಿದರು. ಇದಾದ ಬಳಿಕ ಮಲ್ಲೇಶ್ವಂರಂನಲ್ಲಿ ವಾಸವಾಗಿರುವ ನಾಗಭೂಷಣ್‌ ರಾವ್‌ ಅವರ ಮನೆಗೆ ತೆರಳಿ ಕುಶಲೋಪರಿ ವಿಚಾರಿಸಿ ಸತ್ಕರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಪಾಲರು, ಸ್ವಾತಂತ್ರ್ಯ ಹೋರಾಟಗಾರರ ದೇಶ ಸೇವೆ ನಮ್ಮೆಲ್ಲರಿಗೆ ಸ್ಫೂರ್ತಿ. ಸ್ವಾತಂತ್ರೊéàತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವರ ಕುಟುಂಬಗಳನ್ನು ಗೌರವಿಸುವುದು ಆದ್ಯ ಕರ್ತವ್ಯವಾಗಿದೆ ಎಂದರು.

ಈ ವೇಳೆ ಜಿಲ್ಲಾಧಿಕಾರಿ ಶ್ರೀನಿವಾಸ್‌ ಸೇರಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next