Advertisement

Mangaluru: ಕಾಂಗ್ರೆಸ್‌ನಿಂದ ಸ್ವಾತಂತ್ರ್ಯ ಹರಣ: ಸತೀಶ್‌ ಕುಂಪಲ

10:20 AM Mar 07, 2024 | Team Udayavani |

ಮಂಗಳೂರು: ತುಮಕೂರಿನಲ್ಲಿ ನಡೆಯಬೇಕಾಗಿದ್ದ ಭಯೋತ್ಪಾದನೆ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಬಜರಂಗದಳ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಅವರನ್ನು ಕುಣಿಗಲ್‌ ನಲ್ಲಿ ಪೊಲೀಸರು ಬಂಧಿಸಿದ್ದಾರೆ.

Advertisement

ಕಾಂಗ್ರೆಸ್‌ ಸರಕಾರವು ಪೊಲೀಸ್‌ ಇಲಾಖೆಯ ಮುಖಾಂತರ ದೇಶಭಕ್ತ ಹಿಂದೂ ಮುಖಂಡರನ್ನು ಬಂಧಿಸಿ, ಪರೋಕ್ಷವಾಗಿ ದೇಶದ್ರೋಹಿಗಳ ಪರ ನಿಲ್ಲುವಂತಹ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ದ.ಕ. ಜಿಲ್ಲಾ ಅಧ್ಯಕ್ಷ ಸತೀಶ್‌ ಕುಂಪಲ ಆರೋಪಿಸಿದ್ದಾರೆ.

ಕಾಂಗ್ರೆಸ್‌ ಸರಕಾರ ಅಭಿವ್ಯಕ್ತಿ ಸ್ವಾತಂತ್ರ್ಯ ಕಸಿಯುವ ಮೂಲಕ ಸಂವಿ ಧಾನ ವಿರೋಧಿಯಾಗಿದೆ‌ ಎಂದಿದ್ದಾರೆ.

ಬಜರಂಗದಳ ಖಂಡನೆ

ಹಸಂತಡ್ಕ ಅವರ ಬಂಧನವನ್ನು ಬಜರಂಗದಳ ಖಂಡಿಸಿದ್ದು ಯಾರನ್ನು ಬಂಧಿಸಿದರೂ ಹೋರಾಟ ನಿಲ್ಲದು ಎಂದು ಹೇಳಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next