Advertisement

ಕೆ.ಆರ್.ಎಸ್ ನಲ್ಲಿ ಪದೇ ಪದೇ ಬಿರುಕು ಇದೆ ಅನ್ನೋದು ಸರಿಯಲ್ಲ : ಅಶೋಕ್

01:59 PM Jul 14, 2021 | Team Udayavani |

ಮೈಸೂರು: ನಮಗೆ ಯಾವ ವ್ಯಕ್ತಿ, ರಾಜಕಾರಣಿಯೂ ಮುಖ್ಯ ಅಲ್ಲ, ಕೆಆರ್‌ ಎಸ್ ಡ್ಯಾಂ ಮುಖ್ಯ.
ಡ್ಯಾಂ ಸುರಕ್ಷತೆ ಬಗ್ಗೆ ಸರ್ಕಾರ ವರದಿ ಕೇಳಿತ್ತು. ಅಲ್ಲಿನ ಅಧಿಕಾರಿ ಬಿರುಕು ಇಲ್ಲ ಅಂತ ವರದಿ ಕೊಟ್ಟಿದ್ದಾರೆ.
ಇದಾದ ಬಳಿಕ ಮುಖ್ಯಮಂತ್ರಿಗಳು, ನಾನು, ಮುರುಗೇಶ್ ನಿರಾಣಿ ಎಲ್ಲರೂ ಹೇಳಿಕೆ ನೀಡಿದ್ದೇವೆ. ನಾವೆಲ್ಲ ಹೇಳಿಕೆ ನೀಡಿದ ಮೇಲೆಯೂ ಪದೇ ಪದೇ ಬಿರುಕು ಇದೆ ಅನ್ನೋದು ಸರಿಯಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ.

Advertisement

ಇದರಿಂದಾಗಿ ಅಣೆಕಟ್ಟೆಯ ತಳಭಾಗದಲ್ಲಿರುವ ಜನರು ಮತ್ತು ರೈತರಿಗೆ ಆತಂಕ ಉಂಟಾಗುತ್ತೆ. ಇಷ್ಟೆಲ್ಲ ಆಗುತ್ತಿರುವಾಗ ಸರ್ಕಾರವೂ ಸುಮ್ಮನಿರಲು ಸಾಧ್ಯವಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನೂ ಇಂದು ಮಂಡ್ಯಕ್ಕೆ ಹೋಗುತ್ತಿದ್ದೇನೆ, ಜಿಲ್ಲಾಧಿಕಾರಿ ಭೇಟಿ ಮಾಡುತ್ತೇನೆ. ಕೆಆರ್‌ ಎಸ್ ಡ್ಯಾಂ, ಬೇಬಿ ಬೆಟ್ಟದ ಸುತ್ತ ಏನಾಗಿದೆ ಅಂತ ವರದಿ ನೀಡುವಂತೆ ಡಿಸಿಗೆ ಸೂಚನೆ ಕೊಡುತ್ತೇನೆ. ನಮ್ಮ ಸರ್ಕಾರದಲ್ಲಿ ಅಕ್ರಮ ಗಣಿಗಾರಿಕೆಗೆ ಅವಕಾಶವೇ ಇಲ್ಲ. ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next