Advertisement

ಪೂಂಚ್ ನಲ್ಲಿ ಮತ್ತೆ ಕದನವಿರಾಮ ಉಲ್ಲಂಘಿಸಿದ ಪಾಕ್, ಭಾರತೀಯ ಯೋಧರಿಂದ ಪ್ರತಿದಾಳಿ

08:35 AM Jul 30, 2019 | Nagendra Trasi |

ನವದೆಹಲಿ:ಪಾಕಿಸ್ತಾನ ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿದ್ದು, ಇದಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿರುವುದಾಗಿ ವರದಿ ತಿಳಿಸಿದೆ.

Advertisement

ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಶಾಪುರ್ ಸೆಕ್ಟರ್ ಸಮೀಪ ಸೋಮವಾರ ಪಾಕಸ್ತಾನ ಸೈನಿಕರು ಗುಂಡಿನ ಹಾಗೂ ಮೋರ್ಟಾರ್ ದಾಳಿ ನಡೆಸಿರುವುದಾಗಿ ವಿವರಿಸಿದೆ.

ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನಾಪಡೆ ಪ್ರತಿದಾಳಿ ನಡೆಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸೇನಾಮೂಲಗಳು ತಿಳಿಸಿವೆ.

ಜುಲೈ 20ರಂದು ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ನಡೆಸಿದ ಗುಂಡಿನ ದಾಳಿಯಲ್ಲಿ ನಾಗರಿಕರು ಗಾಯಗೊಂಡಿದ್ದ ಘಟನೆ ನಡೆದಿತ್ತು. ಜುಲೈ 22ರಂದು ರಜೌರಿ ಜಿಲ್ಲೆಯ ಸುಂದರಬನಿ ಸೆಕ್ಟರ್ ಗಡಿಯಲ್ಲಿ ಪಾಕ್ ನಡೆಸಿದ ಗುಂಡಿನ ದಾಳಿಗೆ ಭಾರತೀಯ ಯೋಧರೊಬ್ಬರು ಹುತಾತ್ಮರಾಗಿದ್ದರು ಎಂದು ವರದಿ ವಿವರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next