Advertisement

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

08:25 AM Sep 08, 2024 | Team Udayavani |

ಇಂಫಾಲ್:‌ ಮಣಿಪುರದಲ್ಲಿ (Manipura) ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಶನಿವಾರ ನಡೆದ ಹಿಂಸಾಚಾರ ಘಟನೆಯಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಮಣಿಪುರದ ಜಿರಿಬಾಮ್‌ ಜಿಲ್ಲೆಯಲ್ಲಿ ಹಿಂಸಾಚಾರ ಘಟನೆ ವರದಿಯಾಗಿದೆ. ಶಂಕಿತ ಕುಕಿ ದಂಗೆಕೋರರು ನುಂಗಾಚಪ್ಪಿ ಗ್ರಾಮಕ್ಕೆ ದಾಳಿ ನಡೆಸಿದ್ದಾರೆ. ನುಂಗಾಚಪ್ಪಿ ಗ್ರಾಮವು ಇಂಫಾಲ್‌ ನಿಂದ ಸುಮಾರು 229 ಕಿ.ಮೀ ದೂರದಲ್ಲಿದೆ. ಕುಕು ದಂಗೆಕೋರರು 63 ವರ್ಷ ಪ್ರಾಯದ ಯುರೆಂಬಂ ಕುಲೇಂದ್ರ ಸಿಂಹ ಎಂಬ ವ್ಯಕ್ತಿಯನ್ನು ಹತ್ಯೆ ಮಾಡಿದ್ದಾರೆ. ಮಣಿಪುರದ ಮೊಯಿರಾಂಗ್ ಪಟ್ಟಣದಲ್ಲಿ ಕುಕಿ ದಂಗೆಕೋರರು ನಡೆಸಿದ ರಾಕೆಟ್ ಚಾಲಿತ ಬಾಂಬ್ ದಾಳಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದ ಕಣಿವೆಯ ಪ್ರಾಬಲ್ಯದ ಮೈತೆ ಸಮುದಾಯದ ವೃದ್ಧರೊಬ್ಬರು ಸಾವನ್ನಪ್ಪಿದ ಒಂದು ದಿನದ ನಂತರ ಈ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೈತೆ ಸಮುದಾಯದ ಸಶಸ್ತ್ರ ಗುಂಪುಗಳು ಮತ್ತು ಗುಡ್ಡಗಾಡು ಪ್ರಾಬಲ್ಯದ ಕುಕಿ ಬುಡಕಟ್ಟು ಜನಾಂಗದವರ ನಡುವಿನ ಗುಂಡಿನ ಚಕಮಕಿಯಲ್ಲಿ ಇತರ ಐವರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಗುಂಪುಗಳು ತಮ್ಮನ್ನು “ಗ್ರಾಮ ರಕ್ಷಣಾ ಸ್ವಯಂಸೇವಕರು” ಎಂದು ಕರೆದುಕೊಳ್ಳುತ್ತವೆ.

ಜಿರಿಬಾಮ್‌ ಎಸ್‌ ಪಿ ಮತ್ತು ಪೊಲೀಸರ ತಂಡವು ಸ್ಥಳಕ್ಕೆ ಧಾವಿಸಿ ಪರಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದೆ ಎಂದು ವರದಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next