Advertisement

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

07:29 AM Feb 04, 2022 | Team Udayavani |

ಮೇಷ:

Advertisement

ಹಿರಿಯರಿಂದ ಸುಖ ಸಂತೋಷ. ಸರಕಾರಿ ಕೆಲಸಗಳಲ್ಲಿ ಪ್ರಗತಿ. ಗಣ್ಯರ ಸಂಪರ್ಕ ಮಾನ್ಯತೆ. ಸ್ವಸಾಮರ್ಥ್ಯದಿಂದ ಧನ ಸಂಪಾದನೆ. ಸಹೋದ್ಯೋಗಿಗಳ ಸಹಕಾರ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ.

ವೃಷಭ:

ಧೈರ್ಯ ಶೌರ್ಯ ಪರಾಕ್ರಮದಿಂದ ಕೂಡಿದ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ಕಾರ್ಯವೈಖರಿ. ಸಂಪತ್ತು ವೃದ್ಧಿ. ದಾನ ಧರ್ಮದಲ್ಲಿ ಆಸಕ್ತಿ ಶ್ರದ್ಧೆ. ಬಂಧುಮಿತ್ರರ ಸಹಕಾರ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ.

ಮಿಥುನ:

Advertisement

ಸಂಶೋಧನಾತ್ಮಕ ಪ್ರವೃತ್ತಿ. ಆರೋಗ್ಯ ಗಮನಿಸಿ. ವ್ಯವಹರಿಸುವಾಗ ಮಾತಿನಲ್ಲಿ ಕಠೊರತೆಗೆ ಆಸ್ಪದ ನೀಡದಿರಿ. ಹಣಕಾಸಿನ ಸಂಪತ್ತಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ಅನಿರೀಕ್ಷಿತ ಧನಾಗಮನ ಸಂಭವ.

ಕಟಕ:

ಸಾಂಸಾರಿಕ ಸುಖ ವೃದ್ಧಿ. ದಂಪತಿ ಗಳಲ್ಲಿ ಅನುರಾಗ ಹೆಚ್ಚಾದೀತು. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಜನರ ಒಡನಾಟದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ಪ್ರಾಪ್ತಿ.

ಸಿಂಹ:

ಆರೋಗ್ಯ ತೃಪ್ತಿದಾಯಕ. ಸದಾ ವಿದ್ಯಾರ್ಜನೆಯಲ್ಲಿ ಆಸಕ್ತಿ. ಉತ್ತಮ ಗೌರವದಿಂದ ಕೂಡಿದ ಧನ ಸಂಪತ್ತಿನ ವೃದ್ಧಿ. ಮಕ್ಕಳಲ್ಲಿ ವಿಶೇಷ ಪ್ರೀತಿ, ಸುಖ ಸಂತೋಷ. ದೂರದ ವ್ಯವಹಾರದಲ್ಲಿ ಪ್ರಗತಿ. ಸ್ಥಾನ ಸುಖಾದಿ ಲಭ್ಯ.

ಕನ್ಯಾ:

ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ ನಿರ್ಣಯ ಮಾಡಿ. ಉದ್ಯೋಗ, ಸಂಪತ್ತು ವಿಚಾರದಲ್ಲಿ ಉತ್ತಮ ಪ್ರಗತಿದಾಯಕ ಬದಲಾವಣೆ ತೋರಿಬರುವುವು. ಸಂಶೋಧಕರಿಗೆ ಅನುಕೂಲಕರ ಪರಿಸ್ಥಿತಿ.

ತುಲಾ:

ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಜವಾಬ್ದಾರಿ, ಒತ್ತಡ. ಉತ್ತಮ ಧನಾರ್ಜನೆ ಇದ್ದರೂ ಖರ್ಚಿಗೆ ಹಲ ವಾರು ಮಾರ್ಗಗಳು. ದಂಪತಿಗಳಲ್ಲಿ ತಾಳ್ಮೆ ಇರಲಿ.

ವೃಶ್ಚಿಕ:

ನಿರೀಕ್ಷಿತ ಸ್ಥಾನ ಗೌರವ ಆದರಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ವಿಚಾರ ದಲ್ಲಿ ತೃಪ್ತಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ನಿರಂತರ ಧನ ಸಂಪಾದನೆಯಿಂದ ಆರ್ಥಿಕ ಪ್ರಗತಿ.

ಧನು:

ಆರೋಗ್ಯದಲ್ಲಿ ಪ್ರಗತಿ. ಅಧಿಕ ಧನಾರ್ಜನೆ. ಭೂಮಿ ಆಸ್ತಿ ವ್ಯವಹಾರದಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸಹಾಯ ಒದಗಿ ಅಭಿವೃದ್ಧಿ. ದಾಂಪತ್ಯ ತೃಪ್ತಿದಾಯಕ. ಕುಟುಂಬಿಕರ ಉತ್ತಮ ಸಹಕಾರ, ಪ್ರೋತ್ಸಾಹ.

ಮಕರ:

ಉತ್ತಮ ಆರೋಗ್ಯ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ ಕಾರ್ಯ ಬದಲಾವಣೆ. ಧನಾರ್ಜನೆಗೆ ಸರಿಯಾಗಿ ಖರ್ಚು. ಮಾತಿನಲ್ಲಿ ಹಿಡಿತವಿರಲಿ. ದಾಂಪತ್ಯ ಸುಖ ಉತ್ತಮ. ನೂತನ ಮಿತ್ರರ ಭೇಟಿ.

ಕುಂಭ:

ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಗೃಹೋಪ ವಸ್ತುಗಳ ಸಂಗ್ರಹ. ದೀರ್ಘ‌ ಪ್ರಯಾಣದಿಂದ ದೇಹಾಯಾಸ. ವಿದ್ಯಾರ್ಥಿಗಳಿಗೆ ಸದವಕಾಶ ಕೂಡಿಬರುವುದು.

ಮೀನ:

ಸುದೃಢ ಆರೋಗ್ಯ. ಮಾತಿನಲ್ಲಿ ತಾಳ್ಮೆ, ಹಿಡಿತವಿರಲಿ, ಅನಗತ್ಯ ಚರ್ಚೆಗೆ ಒಳಗಾಗಿ ಆರ್ಥಿಕ ನಷ್ಟಕ್ಕೆ ಒಳಗಾಗದಿರಿ. ಪಾಲುದಾರಿಕಾ ಕ್ಷೇತ್ರದಲ್ಲಿ ಉದ್ಯೋಗ ವ್ಯವಹಾರಗಳಲ್ಲಿ ಪರಸ್ಪರ ಸಹಕಾರ ಪ್ರೋತ್ಸಾಹವಿರಲಿ. ವಿದ್ಯಾರ್ಥಿಗಳಿಗೆ ಅತ್ಯುತ್ತಮ ದಿನ.

Advertisement

Udayavani is now on Telegram. Click here to join our channel and stay updated with the latest news.

Next