Advertisement

ಶುಕ್ರವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

07:48 AM Nov 26, 2021 | Team Udayavani |

ಮೇಷ: ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಸ್ವಸಾಮರ್ಥ್ಯದಿಂದ ಪರಿಶ್ರಮದಿಂದ ಕೂಡಿದ ಅಧಿಕ ಧನಾರ್ಜನೆ. ಎಲ್ಲಾ ಜನರಿಂದಲೂ ಗೌರವ ಆದರ ಮನ್ನಣೆ ದೊರಕುವ ದಿನ.

Advertisement

ವೃಷಭ: ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ. ಧಾರ್ಮಿಕ ಕಾರ್ಯಗಳ ನೇತೃತ್ವ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ಉತ್ತಮ ಬೆಳವಣಿಗೆ. ಗೃಹದಲ್ಲಿ ಸಂತಸದ ವಾತಾವರಣ.

ಮಿಥುನ: ಹೆಚ್ಚಿದ ದೇಹಾಯಾಸ ಪರಿಶ್ರಮದಿಂದ ಕೂಡಿದ ಕಾರ್ಯವೈಖರಿ. ಅನ್ಯರಿಗೆ ಸಹಾಯ ಮಾಡಲು ಹೋಗಿ ತೊಂದರೆಗೊಳಗಾಗದಿರಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಹಣಕಾಸಿನ ವಿಚಾರಗಳಲ್ಲಿ ಸಾಹಸ ಪ್ರವೃತ್ತಿ ಸಲ್ಲದು.

ಕರ್ಕ: ಆರ್ಥಿಕ ವಿಚಾರದಲ್ಲಿ ಅಧಿಕ ಗಮನಹರಿಸುವಿಕೆ. ಸಾಹಸ ಪ್ರವೃತ್ತಿಯ ಕಾರ್ಯ. ಹೆಚ್ಚಿದ ಜನಸಂಪರ್ಕ. ಉದ್ಯೋಗ ವ್ಯವಹಾರಗಳಲ್ಲಿ ವಾಕ್‌ಚತುರತೆಯ ನಡೆ. ಆಸ್ತಿ ವಿಚಾರಗಳಲ್ಲಿ ಗೊಂದಲ. ಅವಿವಾಹಿತರಿಗೆ ವಿವಾಹ ಯೋಗ.

ಸಿಂಹ: ಅಧ್ಯಯನದಲ್ಲಿ ಆಸಕ್ತಿ. ಅನ್ಯರಲ್ಲಿ ಅವಲಂಬಿತರಾಗದೇ ಗಾಂಭೀರ್ಯದಿಂದ ಕೂಡಿದ ವ್ಯವಹಾರದಿಂದ ಯಶಸ್ಸು. ಆರೋಗ್ಯದಲ್ಲಿ ಸುಧಾರಣೆ. ಹಣಕಾಸಿನ ವಿಚಾರದಲ್ಲಿ ಅಜಾಗ್ರತೆಯಿಂದ ನಷ್ಟ ಸಂಭವ. ಹಿರಿಯರಿಂದ ಸಂತೋಷ.

Advertisement

ಕನ್ಯಾ: ದೈಹಿಕ ಮಾನಸಿಕ ಸಂತುಷ್ಟತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಅಭಿವೃದ್ಧಿದಾಯಕ ದಿನ. ಗೌರವ ಆದರಗಳು ಲಭಿಸುವ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಕೀರ್ತಿ, ತೃಪ್ತಿ.

ತುಲಾ: ಎಲ್ಲಾ ಕೆಲಸ ಕಾರ್ಯಗಳಲ್ಲಿ ಲಾಭ. ಪಾಂಡಿತ್ಯ ಸುಖಾದಿಗಳು ವೃದ್ಧಿ. ಸ್ತ್ರೀ ಪುರುಷರಿಗೆ ಪರಸ್ಪರರ ಸಹಕಾರ. ಉತ್ತಮ ಧನ ಸಂಚಯನ. ಆಸ್ತಿ ವಿಚಾರ ಗಳಲ್ಲಿ ಎಚ್ಚರಿಕೆ ಅಗತ್ಯ. ಗೃಹದಲ್ಲಿ ಚರ್ಚೆಗೆ ಅವಕಾಶ ನೀಡದಿರಿ.

ವೃಶ್ಚಿಕ: ಆರೋಗ್ಯ ವೃದ್ಧಿ. ಅನಿರೀಕ್ಷಿತ ಸ್ಥಾನ ಸುಖಾದಿ ಪ್ರಾಪ್ತಿ. ಹಿರಿಯ ಅಧಿಕಾರಿಗಳ ಸಹಕಾರ ಪ್ರೋತ್ಸಾಹಾದಿ ಲಾಭ. ಮಾನಸಿಕ ತೃಪ್ತಿ. ನೂತನ ಮಿತ್ರರ ಸಮಾಗಮ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ ನಿರ್ಮಾಣ.

ಧನು: ಉತ್ತಮ ದೈಹಿಕ ಮಾನಸಿಕ ಆರೋಗ್ಯ. ಧನಾರ್ಜನೆಗೆ ಕೊರತೆ ಕಾಣದು. ಪಾಲುದಾರರಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ. ಗುರುಹಿರಿಯರ ಆರೋಗ್ಯ ಬಗ್ಗೆ ಗಮನಿಸಿ.

ಮಕರ: ಬಂಧುಮಿತ್ರರ ಸಹಕಾರ. ಹಣಕಾಸಿನ ವಿಚಾರ  ದಲ್ಲಿ ಏರಿಳಿತವಾದರೂ ಲಾಭಾಂಶ ವೃದ್ಧಿ. ಪರಊರ ಸಹೋದ್ಯೋಗಿಗಳಿಂದ ಸಹಕಾರ ವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ. ಮಕ್ಕಳಿಂದಲೂ ದಾಂಪತ್ಯದಲ್ಲೂ ಸಂತೋಷ.

ಕುಂಭ: ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಅಧಿಕ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಧಾರ್ಮಿಕ ಸ್ಥಳಗಳ ಸಂದರ್ಶನ. ವಿದ್ಯಾರ್ಥಿಗಳಿಗೆ ಸಕಲ ಸೌಕರ್ಯಗಳ ಲಾಭ.

ಮೀನ: ಆರೋಗ್ಯ ವೃದ್ಧಿ. ದೈನಂದಿನ ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ಸ್ಥಾನಮಾನ ಗೌರವ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ.

Advertisement

Udayavani is now on Telegram. Click here to join our channel and stay updated with the latest news.

Next