Advertisement

ಶುಕ್ರವಾರದ ನಿಮ್ಮ ರಾಶಿಫಲದಲ್ಲಿ ಏನಿದೆ : ನೋಡಿ ನಿಮ್ಮ ಗ್ರಹಬಲ

08:50 AM Aug 13, 2021 | Team Udayavani |

xಮೇಷ: ವಾಹನ, ಭೂಮಿ ಇತ್ಯಾದಿ ಆಸ್ತಿ ವಿಚಾರ ದಲ್ಲಿಯೂ, ಉದ್ಯೋಗ, ಸರಕಾರೀ ವ್ಯವಹಾರಗಳಲ್ಲಿ ಕೂಡಿದ ಚಟುವಟಿಕೆ. ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಧನಾರ್ಜನೆಗೆ ಕೊರತೆಯಾಗದು. ಉತ್ತಮ ಸ್ಥಾನಮಾನ ಸುಖ.

Advertisement

ವೃಷಭ: ಜವಾಬ್ದಾರಿಯುತ ಕಾರ್ಯ ವೈಖರಿಯಿಂದ ಸ್ಥಾನ ಗೌರವಾದಿ ಸುಖ ಪ್ರಶಂಸೆ. ಆರೋಗ್ಯ ವೃದ್ಧಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಸಾಂಸಾರಿಕ ಸುಖದಲ್ಲಿ ವೃದ್ಧಿ . ಪಾಲುದಾರಿಕಾ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ.

ಮಿಥುನ: ಅತಿಯಾದ ಕಾರ್ಯ ಒತ್ತಡ ಎದುರಾದೀತು. ಮಾನಸಿಕವಾಗಿ ಸುದೃಢರಾಗಿದ್ದರೂ ದೈಹಿಕ ಶ್ರಮ ಅಧಿಕ ವೆನಿಸೀತು. ಮಾತಿನಲ್ಲಿ ಸಹನೆ ಹಾಗೂ ಎಚ್ಚರವಿರಲಿ. ಮತ್ತೂಬ್ಬರ ವ್ಯವಹಾರದಲ್ಲಿ ದಾಕ್ಷಿಣ್ಯಕ್ಕೆ ಸಿಕ್ಕಿ ತೊಂದರೆಗೊಳಗಾಗದಿರಿ.

ಕರ್ಕ: ದೀರ್ಘ‌ ಪ್ರಯಾಣಕ್ಕೆ ಅವಕಾಶ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಹೆಚ್ಚಿನ ಅವಕಾಶ ತೋರೀತು. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ.

ಸಿಂಹ: ದೇಹಾರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ. ಪತ್ರ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿದವ ರಿಂದಲೂ ದೃಢ ನಿರ್ಧಾರದಿಂದ ಕಾರ್ಯ ಸಫ‌ಲತೆ. ಅನ್ಯರಿಗೆ ಸಹಾಯ ಮಾಡುವಾಗ ಸ್ಪಷ್ಟತೆ ಇರಲಿ. ದಾಂಪತ್ಯ ಸಮಾಧಾನಕರ.

Advertisement

ಕನ್ಯಾ: ಆರೋಗ್ಯ ವೃದ್ಧಿ . ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆಯ ನಡೆ ಅಗತ್ಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ನಿರೀಕ್ಷಿತ ಸ್ಥಾನ ಪ್ರಾಪ್ತಿ.

ತುಲಾ: ಸುಖ ಸಂತೋಷದಿಂದ ಕೂಡಿದ ಸಮಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ . ಅಧಿಕ ಧನಾರ್ಜನೆ ಇದ್ದರೂ ಲಾಭಾಂಶ ಕಡಿಮೆ ತೋರೀತು. ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಮಯ.

ವೃಶ್ಚಿಕ: ಧೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ಚಟುವಟಿಕೆ ಗಳು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಸಹೋದರಾದಿ ವರ್ಗದವರಿಂದಲೂ ಸಹೋದ್ಯೋಗಿಗಳಿಂದಲೂ ಉತ್ತಮ ಪ್ರೋತ್ಸಾಹ ಸಹಕಾರ ಪ್ರಾಪ್ತಿ.ಉದ್ಯೋಗ ವ್ಯವಹಾರದಲ್ಲಿ ಹೆಚ್ಚಿನ ಗೌರವ.

ಧನು: ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ದೇವತಾ ಕಾರ್ಯಗಳ ಸಂಭ್ರಮ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದ ನಡೆಯಿಂದ ತೊಂದರೆ ಆಗುವ ಸಾಧ್ಯತೆ. ಸಾಂಸಾರಿಕ ಸುಖ ತೃಪ್ತಿದಾಯಕ.

ಮಕರ: ಉತ್ತಮ ಸ್ಥಿರ ಆರೋಗ್ಯ. ವಿವೇಕದಿಂದ ಕೂಡಿದ ಕೆಲಸಕಾರ್ಯಗಳು ಜನಮನ್ನಣೆ. ಉತ್ತಮ ವಾಕ್‌ ಚತುರತೆಯಿಂದ ಹೆಚ್ಚಿನ ಧನಾರ್ಜನೆ. ಕುಟುಂಬ ಸುಖ ವೃದ್ಧಿ. ನೂತನ ಮಿತ್ರರ ಸಮಾಗಮ. ದೀìರ್ಘ‌ ಪ್ರಯಾಣ ಯೋಗ.

ಕುಂಭ: ಉತ್ತಮ ಕಾರ್ಯ ಚಟುವಟಿಕೆಗಳಿಂದ ಕೂಡಿದ ದಿನಚರಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳ ನೇತೃತ್ವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು. ದಾಂಪತ್ಯ ಸುಖ ತೃಪ್ತಿದಾಯಕ.

ಮೀನ: ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಉತ್ತಮ ಧನಾರ್ಜನೆ ಹಾಗೂ ಅಧಿಕ ಉಳಿತಾಯ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ಗುರುಹಿರಿಯರ ಆರೋಗ್ಯ ಸುಧಾರಣೆ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಸ್ಥಾನಸುಖ.

Advertisement

Udayavani is now on Telegram. Click here to join our channel and stay updated with the latest news.

Next