Advertisement

ಶುಕ್ರವಾರದ ರಾಶಿ ಫಲ; ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ, ಸಾಲಗಾರರ ಬಲೆಗೆ ಸಿಲುಕದಿರಿ

07:01 AM Oct 14, 2022 | Team Udayavani |

ಮೇಷ: ಕ್ರಯ ವಿಕ್ರಯ ನಿಪುಣತೆ. ದೈಹಿಕ ಆರೋಗ್ಯದಲ್ಲಿ ಉದಾಸೀನತೆ. ಸಂದರ್ಭೋಚಿತ ಗುಣ ಪವೃತ್ತಿ. ಅನೇಕ ವಿಚಾರಗಳಲ್ಲಿ ಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಹೆಚ್ಚಿದ ಪರಿಶ್ರಮ. ಹಠ ಮಾಡದೇ ತಾಳ್ಮೆಯಿಂದ ಕಾರ್ಯವೆಸಗಿ.

Advertisement

ವೃಷಭ: ಧಾರ್ಮಿಕ ಚಟುವಟಿಕೆಗಳಲ್ಲಿ ತತ್ಪರತೆ. ದೂರ ಪ್ರಯಾಣ. ಆರ್ಥಿಕ ಸುದೃಢತೆ. ಉತ್ತಮ ವಾಕ್‌ಚತುರತೆಯಿಂದ ಜನಮನ್ನಣೆ. ಸ್ತ್ರೀಪುರುಷರು ಜೀವನದಲ್ಲಿ ಪರಸ್ಪರ ಪ್ರೋತ್ಸಾಹಿಸಿ. ವೈವಾಹಿಕ ಯೋಗ. ಗೃಹ ಸಂಬಂಧೀ ವಿಚಾರದಲ್ಲಿ ಖರ್ಚು ವೆಚ್ಚ ಅಧಿಕ.

ಮಿಥುನ: ಪರರ ಕಾರ್ಯದಲ್ಲಿ ಆಸಕ್ತಿ. ಜವಾಬ್ದಾರಿಯಿಂದ ನಿರ್ವಹಿಸುವುದರಿಂದ ವೈಯಕ್ತಿಕ ತೊಂದರೆಗೊಳಗಾಗದಿರಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಸಾಲಗಾರರ ಬಲೆಗೆ ಸಿಲುಕದಿರಿ. ಗುರುಹಿರಿಯರ ಆಜ್ಞಾಪಾಲನೆಯಲ್ಲಿ ಆಸಕ್ತಿ. ಮಕ್ಕಳ ನಿಮಿತ್ತ ಹೆಚ್ಚಿನ ಶ್ರಮ.

ಕರ್ಕ: ಸರ್ವರಲ್ಲಿ ದ್ವೇಷ ಸಾಧಿಸದಿರಿ. ಕೆಲಸ ಕಾರ್ಯಗಳಲ್ಲಿ ಉತ್ಸಾಹವಿರಲಿ. ಆಲಸ್ಯ ತೋರದಿರಿ. ಗುರುಹಿರಿಯರ ಚಿಂತೆ ಕಾಡೀತು. ವಿದೇಶ ಮೂಲದ ಜನ ಸಂಪರ್ಕ. ಸಹೋದರ ಸಮಾನರೊಂದಿಗೆ ತಾಳ್ಮೆ ಅಗತ್ಯ. ಸತ್ಕರ್ಮಕ್ಕೆ ಧನವ್ಯಯ.

ಸಿಂಹ: ಸಜ್ಜನರಿಂದ ಗೌರವ ಆದರ ಮನ್ನಣೆ. ಹಣಕಾಸಿನ ವಿಚಾರದಲ್ಲಿ ನಷ್ಟ ಸಂಭವಿಸಿದರೂ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಸರಕಾರೀ ಕೆಲಸಗಳಲ್ಲಿ ಮಗ್ನತೆ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳಿಂದ ಸುಖ ಸಂತೋಷ ವೃದ್ಧಿ. ಆರೋಗ್ಯದಲ್ಲಿ ಸುದಾರಣೆ.

Advertisement

ಕನ್ಯಾ: ವಿದ್ಯೆಯಲ್ಲಿ ತಲ್ಲೀನತೆ. ಮಕ್ಕಳಿಂದ ಸಂತೋಷ ವಾರ್ತೆ. ಸಂಶೋಧನಾತ್ಮಕ ಕಾರ್ಯಗಳಲ್ಲಿ ಆಸಕ್ತಿ. ಪರರಿಗೆ ಸಹಾಯ ಮಾಡಿದುದರಿಂದ ಕೀರ್ತಿ ಯಶಸ್ಸು ಗೌರವ ಪ್ರಾಪ್ತಿ. ಉತ್ತಮ ನಿರೀಕ್ಷಿತ ಧನಾಗಮ. ಗುರುಹಿರಿಯರ ಸಹಕಾರ. ಸುದೃಢ ಆರೋಗ್ಯ.

ತುಲಾ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಕಾರ್ಯ ಸಾಧಿಸಿದ ಸಂತೋಷ. ನಿರàಕ್ಷಿತ ಸ್ಥಾನ ಗೌರವಾದಿ ಲಭ್ಯ. ದೂರದ ವ್ಯವಹಾರಗಳಿಂದ ಅಧಿಕ ಧನಾರ್ಜನೆ. ಉತ್ತಮ ವಾಕ್‌ಚತುರತೆ. ಮನೆಯಲ್ಲಿ ಸಂತಸದ ವಾತಾವರಣ. ಗುರುಹಿರಿಯರಿಗೆ ಹೆಚ್ಚಿದ ಜವಾಬ್ದಾರಿ.

ವೃಶ್ಚಿಕ: ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಉದಾಸೀನ ಪ್ರವೃತ್ತಿ ಸಲ್ಲದು. ನೂತನ ಮಿತ್ರರ ಭೇಟಿ. ಸಹೋದ್ಯೋಗಿಗಳ ಸಹಕಾರದಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಅವಿವಾಹಿತರಿಗೆ ವಿವಾಹ ಭಾಗ್ಯ ಕೂಡಿ ಬರುವುದು. ಗೃಹೋಪಕರಣಗಳ ಸಂಗ್ರಹ.

ಧನು: ಸರಿಯಾದ ನಿಯಮ ಪಾಲನೆಯಿಂದ ಆರೋಗ್ಯ ವೃದ್ಧಿ. ಉತ್ತಮ ಧನಾರ್ಜನೆ. ನಿರೀಕ್ಷಿತ ಸಹಾಯ ಲಭ್ಯ. ಸಣ್ಣ ಪ್ರಯಾಣ ಯೋಗ. ಸಾಂಸಾರಿಕ ಸುಖ ಮಧ್ಯಮ. ವಿದ್ಯಾರ್ಥಿಗಳು ಪರರ ಸಹಾಯ ಪಡೆದು ನಿರೀಕ್ಷಿತ ಗುರಿ ಸಾಧಿಸಿರಿ. ಧಾರ್ಮಿಕ ಕಾರ್ಯಗಳಿಗೆ ಹೆಚ್ಚಿನ ಶ್ರಮ.

ಮಕರ: ಆರೋಗ್ಯ ಸುಧಾರಣೆ. ದೂರದ ವ್ಯವಹಾರಗಳಿಂದ ಉತ್ತಮ ಧನಾರ್ಜನೆ. ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಪ್ರಗತಿ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳ ಬಗ್ಗೆ ಹೆಚ್ಚಿದ ಗಮನ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಒದಗುವ ಸಂಭವ.

ಕುಂಭ: ದೀರ್ಘ‌ ಪ್ರಯಾಣದಲ್ಲಿ ನಿರೀಕ್ಷಿತ ಸಫ‌ಲತೆ. ಉತ್ತಮ ಸ್ಥಾನ ಗೌರವಾದಿ ಲಭ್ಯ. ಅಧಿಕ ಧನಾರ್ಜನೆ. ನೂತನ ಮಿತ್ರರ ಭೇಟಿ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ದಾಂಪತ್ಯ ಸುಖ ಉತ್ತಮ.

ಮೀನ: ಹಣಕಾಸಿನ ವಿಚಾರದಲ್ಲಿ ಜಾಗೃತೆಯ ನಡೆ ಅಗತ್ಯ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಸರಿಯಾದ ದಾಖಲಾತಿಯೊಂದಿಗೆ ವ್ಯವಹರಿಸಿ. ದೂರದ ವ್ಯವಹಾರ ನಿಮಿತ್ತ ಪ್ರಯಾಣ ಸಂಭವ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ.

Advertisement

Udayavani is now on Telegram. Click here to join our channel and stay updated with the latest news.

Next